Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಚಿತ ಬಸ್‍ಪಾಸ್ ಹಾಗೂ ಪಿಂಚಣಿ ಹೆಚ್ಚಳಕ್ಕಾಗಿ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಅಂಗವಿಕಲರ ಕ್ಷೇಮಾಭಿವೃದ್ದಿ ಸಂಘ ತೀರ್ಮಾನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜೂ.21) : ರಾಜ್ಯಾದ್ಯಂತ ಸರ್ಕಾರಿ ಬಸ್‍ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಹಾಗೂ ಪಿಂಚಣಿ ಹೆಚ್ಚಳಕ್ಕೆ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಮಂಜುನಾಥ ಅಂಗವಿಕಲರ ಕ್ಷೇಮಾಭಿವೃದ್ದಿ ಸಂಘದ ಸಭೆ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆಯಿತು.

ಅಂಗವಿಕಲರಿಂದ ವರ್ಷಕ್ಕೆ 660 ರೂ.ಗಳನ್ನು ಕಟ್ಟಿಸಿಕೊಂಡು ನೂರು ಕಿ.ಮೀ. ಒಳಗೆ ಸಂಚರಿಸಲು ಸರ್ಕಾರ ಅವಕಾಶ ನೀಡಿತ್ತು. ಈಗ ಉಚಿತವಾಗಿ ರಾಜ್ಯಾದ್ಯಂತ ಸಂಚರಿಸಲು ವ್ಯವಸ್ಥೆ ಕಲ್ಪಿಸಬೇಕು. ಅದೇ ರೀತಿ ಕೆಲವು ಅಂಗವಿಕಲರಿಗೆ ಮಾಸಿಕ ಎಂಟು ನೂರು ರೂ. ಇನ್ನು ಕೆಲವರಿಗೆ 1400 ರೂ. ಪಿಂಚಣಿ ಬರುತ್ತಿದೆ. ಅದನ್ನು ಮೂರು ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಜೂ. 27 ರಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಯಿತೆಂದು ಸಂಘದ ಅಧ್ಯಕ್ಷ ಟಿ.ಬಿ.ಮಾರುತಿ ತಿಳಿಸಿದ್ದಾರೆ.

ಗೌರವಾಧ್ಯಕ್ಷ ಕೆ.ಹೆಚ್.ಜಯಪ್ರಕಾಶ್, ಕಾರ್ಯದರ್ಶಿ ಭಾನುಕಿರಣ, ಖಜಾಂಚಿ ಎನ್.ತಿಪ್ಪೇಸ್ವಾಮಿ, ಸದಸ್ಯರುಗಳಾದ ಆರ್.ತಿಪ್ಪೇಸ್ವಾಮಿ, ಟಿ.ಕೆ.ವೆಂಕಟೇಶ್, ಎಂ.ಎಸ್.ಪಾಪಯ್ಯ, ಪಿ.ಮಂಜುನಾಥ, ರಂಗಸ್ವಾಮಿ, ಕುಮಾರ್, ಆನಂದ, ಮಂಜುನಾಥ ಸಭೆಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

High Blood Pressure : ಅಧಿಕ ರಕ್ತದೊತ್ತಡ ಎಷ್ಟು ಅಪಾಯಕಾರಿ ಗೊತ್ತಾ ?

ಸುದ್ದಿಒನ್ : ಅಧಿಕ ರಕ್ತದೊತ್ತಡ ಎನ್ನುವುದು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಈ ಸಮಸ್ಯೆ ಇದ್ದರೆ ಪ್ರತಿದಿನ ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಳ್ಳಬೇಕು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು?

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು? ಮಂಗಳವಾರ ರಾಶಿ ಭವಿಷ್ಯ -ಮೇ-21,2024 ನರಸಿಂಹ ಜಯಂತಿ ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!