Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿದ್ಯುತ್ ಬಿಲ್ ದಿಢೀರ್ ಹೆಚ್ಚಳಕ್ಕೆ ಕಾರಣವೇನು ಗೊತ್ತಾ..?

---Advertisement---

 

 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಕೊಟ್ಟ ಮಾತಿನಂತೆ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡುವುದಕ್ಕೆ ಆದೇಶ ಹೊರಡಿಸಿದೆ‌. ಆದರೆ ಅದಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಆದರೆ ಅದಕ್ಕೂ ಮುನ್ನ ಈ ಬಾರಿಯ ವಿದ್ಯುತ್ ಬಿಲ್ ದುಪ್ಪಟ್ಟಾಗಿದೆ. ಎಲ್ಲರಿಗೂ ಶಾಕಿಂಗ್ ಎನಿಸುವಷ್ಟು ವಿದ್ಯುತ್ ದರ ಬಂದಿದೆ. ವಿದ್ಯುತ್ ಫ್ರಿಯಾಗಿ ಕೊಡ್ತೀವಂತ ಹೇಳಿ ಸರ್ಕಾರವೇ ವಿದ್ಯುತ್ ದರ ಏರಿಕೆ ಮಾಡಿದೆ ಅನ್ನೋದು ಹಲವರ ಬೇಸರವಾಗಿದೆ. ಆದರೆ ವಿದ್ಯುತ್ ದರ ಏರಿಕೆಯಾಗುವುದಕ್ಕೆ ಕಾರಣ ಏನು ಅನ್ನೋದನ್ನ ಬೆಸ್ಕಾಂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರತೀ ವರ್ಷ ರಾಜ್ಯ ವಿದ್ಯುತ್ ದರ ನಿಯಂತ್ರಣ ಆಯೋಗ ದರ ಪರಿಷ್ಕರಣೆ ಮಾಡುತ್ತದೆ. ಇದಕ್ಕೆ ಎಲ್ಲಾ ಎಸ್ಕಾಂಗಳಿಂದ ಅರ್ಜಿ ಸಲ್ಲಿಸುತ್ತೇವೆ. ಅದರಂತೆ ಮಾರ್ಚ್, ಎಪ್ರಿಲ್ ತಿಂಗಳಲ್ಲಿ ದರ ಪರಿಷ್ಕರಣೆ ಮಾಡಿದ್ದಾರೆ. ಹೀಗಾಗಿ ದರ ಹೆಚ್ಚಳ ಆಗಿದೆ. ಯೂನಿಟ್ ಗೆ 70 ಪೈಸೆ ಹೆಚ್ಚಳ ಆಗಿದೆ. 1 ರಿಂದ 100 ಯೂನಿಟ್ ವಿದ್ಯುತ್ ಬಳಕೆಗೆ 4 ರೂ .75 ಪೈಸೆ. 101 ಯೂನಿಟ್ ಮೇಲೆ ಬಂದರೆ 7 ರೂಪಾಯಿ ಮಾಡಲಾಗಿದೆ.

ಇನ್ನು ಈ ದರ ಏರಿಕೆಯನ್ನು ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿತ್ತು. ಆದರೆ ಜೂನ್ ನಲ್ಲಿ ಬಿಲ್ ವಿತರಣೆ ಮಾಡಲಾಗಿದೆ. ಕೊಡುವಾಗ ಏಪ್ರಿಲ್ ಹಾಗೂ ಮೇ ಎರಡು ತಿಂಗಳ ಬಿಲ್ ಅನ್ನು ಒಟ್ಟಿಗೆ ಕೊಡಲಾಗಿದೆ. ಹೀಗಾಗಿ ಇಂತದ್ದೊಂದು ಸಮಸ್ಯೆ ಎದುರಾಗಿದೆ ಎನ್ನುತ್ತಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment