Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಜೂ.25) :  ಮಾನವನಿಗೆ ಜ್ಞಾನ, ಬೆಳಕನ್ನು ನೀಡಿ ದುಃಖವನ್ನು ದೂರ ಮಾಡುವುದು ವಿದ್ಯೆ ಎಂದು ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು ತಿಳಿಸಿದರು.

ಕರ್ನಾಟಕ ಮುಸ್ಲಿಂ ಸಮಾಜ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಶಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ತ.ರಾ.ಸು.ರಂಗಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿ ಮಾತನಾಡಿದರು.

ಮುಸ್ಲಿಂ ಸಮುದಾಯದಲ್ಲಿ ಸ್ಕೂಲ್ ಬಿಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಆದರೆ ನಿಮ್ಮ ಸಮುದಾಯದಲ್ಲಿ ಉನ್ನತವಾದ ಅಭ್ಯಾಸವನ್ನು ಮಾಡುವುದರ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೂಡುಗೆಯನ್ನು ನೀಡಿರುವ ಉದಾಹರಣೆಗಳು ಇವೆ.

ವಿದ್ಯೆ ಸರ್ವಕಾಲಕ್ಕೂ ಸಹಾ ಗೌರವವನ್ನು ತರುತ್ತದೆ. ಅದರೆ ಹಣ ಮತ್ತು ಅಧಿಕಾರ ಗೌರವವನ್ನು ನೀಡುವುದಿಲ್ಲ, ಮಾಜಿ ರಾಷ್ಟ್ರಪತಿಗಳಾದ ಕಲಾಂರವರು ವಿದ್ಯಾವಂತರಾಗಿದ್ದರಿಂದ ಅವರನ್ನು ರಾಷ್ಟ್ರಪತಿಗಳಾಗಿ ಮಾಡಿತು ಅಲ್ಲದೆ ಪ್ರಪಂಚದಲ್ಲಿ ಉತ್ತಮವಾದ ಹೆಸರನ್ನು ಹೊಂದಿದ್ದರು. ವಿದ್ಯೆಯಿಂದ ಬದುಕನ್ನು ನಡೆಸಲು ಸಾಧ್ಯವಿದೆ ಎಂದು ತೋರಿಸಿದವರು ಎಂದು ಶ್ರೀಗಳು ತಿಳಿಸಿದರು.

ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸುವ ಶಕ್ತಿ ಶಿಕ್ಷಕರು ಮತ್ತು ಪೋಷಕರ ಮೇಲಿದೆ. ಇದರಿಂದ ಉತ್ತಮವಾದ ವ್ಯಕ್ತಿಗಳನ್ನು ರೂಪಿಸಬಹುದಾಗಿದೆ. ಈಗ ಮುಸ್ಲಿಂ ಜನಾಂಗದಲ್ಲಿ ಶಾಲೆಯನ್ನು ಬಿಡಿಸುವವರ ಸಂಖ್ಯೆ ಕಡಿಮೆ ಇದೆ. ಮಕ್ಕಳಿಗೆ ಈ ರೀತಿಯಾದ ಸಹಾಯ ಮಾಡುವ ಕಲ್ಪನೆ ಉತ್ತಮವಾದದು, ವಿದ್ಯೆ ಯಾವೂತ್ತು ನಿಂತ ನೀರಾಗದೆ ಹರಿಯುವ ನೀರಾಗಬೇಕಿದೆ.

ಇದರಿಂದ ಮನಸ್ಸು ಮತ್ತು ದೇಶ ಸ್ವಚ್ಚವಾಗುತ್ತದೆ ಎಂದ ಶ್ರೀಗಳು ಪುಸ್ತಕ ಮಾತ್ರ ವಿದ್ಯೆ ಅಲ್ಲ, ಮೇದಾ ಶಕ್ತಿ ಪ್ರಚೋದಿಸುವ ವಿದ್ಯೆ ಆಗುತ್ತದೆ. ವಿದ್ಯೆ ಯಾವೂತ್ತು ಸಹಾ ದುಃಖವನ್ನು ನೀಡುವುದಿಲ್ಲ, ಮುಕ್ತಿಯನ್ನು ಪಡೆಯುವ ದಾರಿ ವಿದ್ಯೆಯಾಗಿದೆ ಎಂದು ಶಿವಲಿಂಗಾನಂದ ಮಹಾಸ್ವಾಮಿಗಳು ತಿಳಿಸಿದರು.

ವಕ್ಫ್ ಮಂಡಳಿ ರಾಜ್ಯ ಸಮಿತಿ ಸದಸ್ಯ ಡಾ.ಅನ್ವರ್‍ಪಾಷ ಮಾತನಾಡಿ, ಮಕ್ಕಳ ಪ್ರಗತಿಭೆಯನ್ನು ಗುರುತಿಸಿ ಅದನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಆಗ ಮಾತ್ರ ಪ್ರತಿಭೆಗಳು ಹೂರ ಬರಲು ಸಾಧ್ಯವಿದೆ. ಇಂತಹ ಕೆಲಸವನ್ನು ಈ ರೀತಿಯ ಸಂಘ ಸಂಸ್ಥೆಗಳು ಮಾಡಬೇಕಿದೆ. ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳಿಗೆ ಸೇತುವೆಯಾಗಿ ಕೆಲಸವನ್ನು ಮಾಡಬೇಕಿದೆ.

ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿದರೆ ಮಾತ್ರವೇ ನಿಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ಪ್ರತಿ ದಿನ ನಿಮ್ಮ ಮಗು ಯಾವ ರೀತಿ ಓದುತ್ತಿದೆ, ಎಂಬುದನ್ನು ಪರಿಶೀಲನೆ ಮಾಡಿ ವಾರಕ್ಕೋಮ್ಮೆ ಶಾಲೆಯ ಶಿಕ್ಷಕರನ್ನು ಬೇಟಿ ನಿಮ್ಮ ಮಗುವಿನ ಬಗ್ಗೆ ತಿಳಿಯಬೇಕಿದೆ. ಈ ರೀತಿಯಾದ ಸ್ಪಂದನೆ ಇದ್ಧಾಗ ಮಾತ್ರ ವಿದ್ಯಾರ್ಥಿಗಳು ಉತ್ತಮವಾದ ಸ್ಥಾನಕ್ಕೆ ಹೋಗಲು ಸಾಧ್ಯವಿದೆ. ಶಿಕ್ಷಕರಾದವರು ಮಕ್ಕಳ ಭವಿಷ್ಯದ ಬಗ್ಗೆ ಆಲೋಚನೆಯನ್ನು ಮಾಡಬೇಕಿದೆ. ತಮ್ಮ ವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಢಿಸಿಕೊಳ್ಳುವಂತೆ ಕರೆ ನೀಡಿದರು.

ಆಧ್ಯಾತ್ಮಿಕ ಚಿಂತಕ ಅಬ್ದುಲ್ ಖಾದರ್ ಸಖಾಫಿ, ದಿವ್ಯ ಸಾನಿಧ್ಯ ವಹಿಸಿದ್ದರು. ಕೆ.ಎಕ್ಬಾಲ್ ಅಧ್ಯಕ್ಷತೆ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಶಾಕೀರ್ ಅಹಮದ್ ಅ.ತೋಂಡಿಖಾನ್, ಕಾಂಗ್ರೆಸ್ ಮುಖಂಡ ಅಬ್ದುಲ್ ರೆಹಮಾನ್ ಭಾಗವಹಿಸಿದ್ದರು.

ಆಯಿಷ ಪ್ರಾರ್ಥಿಸಿದರೆ, ಕರ್ನಾಟಕ ಮುಸ್ಲಿಂ ಸಮಾಜದ ರಾಜ್ಯ ಸಂಚಾಲಕ ಎಂ.ಹನೀಫ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮಹಮ್ಮದ್ ತಾಜೀರ್ ಭಾಷಾ ಪ್ರಸ್ತಾವಿಕವಾಗಿ ಮಾತನಾಡಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...