Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2018ರಲ್ಲಿ ಭೂಮಿಪೂಜೆಯಾಗಿದ್ದ ಬಸವ ಅಂತರಾಷ್ಟ್ರೀಯ ಕೇಂದ್ರಕ್ಕೆ ಸಿದ್ದರಾಮಯ್ಯರಿಂದ ಮತ್ತೆ ಉದ್ಘಾಟನೆ ಭಾಗ್ಯ ಸಿಗುತ್ತಾ..?

Facebook
Twitter
Telegram
WhatsApp

ಬಾಗಲಕೋಟೆ: ಸಿದ್ದರಾಮಯ್ಯ ಅವರ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವ ಕಾರಣ ಬಸವ ಅಂತರಾಷ್ಟ್ರೀಯ ಕೇಂದ್ರದ ಬಗ್ಗೆ ಮತ್ತೆ ಭರವಸೆ ಮೂಡಿದೆ. ಯಾಕಂದ್ರೆ 2018 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರವಿದ್ದಾಗ ಬಸವ ಅಂತರಾಷ್ಟ್ರೀಯ ಕೇಂದ್ರಕ್ಕೆ ಗುದ್ದಲಿ ಪೂಜೆ ನಡೆದಿತ್ತು. ಆದರೆ ಬಳಿಕ ನೆನೆಗುದಿಗೆ ಬಿದ್ದಿತ್ತು. ಈಗ ಮತ್ತೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುವ ಕಾರಣ, ಮತ್ತೆ ನೆನೆಗುದಿಗೆ ಬಿದ್ದಿರುವ ಯೋಜನೆಗೆ ಮತ್ತೆ ಶುರುವಾಗುವ ಸಾಧ್ಯತೆ ಇದೆ.

140 ಕೋಟಿ ವೆಚ್ಚದಲ್ಲಿ ಅಕ್ಷರಧಾಮ ಮಾದರಿಯಲ್ಲಿ ಬಸವ ಅಂತಾರಾಷ್ಟ್ರೀಯ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಶಿಲಾನ್ಯಾಸಗೊಂಡು ಐದು ವರ್ಷಕ್ಕೂ ಅಧಿಕವಾಗಿದ್ದು ಇದುವರೆಗೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಅನುಭವ ಮಂಟಪ, ಸನ್ನಿವೇಶಗಳನ್ನು ಚಿತ್ರಕಲೆ, ಶಿಲ್ಪಕಲೆ, ತ್ರಿ ಡಿ ತಂತ್ರಜ್ಞಾನ ಬಳಸಿ ಪ್ರದರ್ಶನ ಮಾಡುವುದು, ಬಸವ ಅಂತಾರಾಷ್ಟ್ರೀಯ ಮ್ಯೂಜಿಯಂ, ಶರಣ ಗ್ರಾಮ ನಿರ್ಮಾಣ ಕಲ್ಪನೆಯನ್ನು ಈ ಅಂತರಾಷ್ಟ್ರೀಯ ಕೇಂದ್ರದಲ್ಲಿ ಮಾಡಲಾಗಿದೆ.

ಭೂಮಿ ಪೂಜೆ ಮಾಡಿದ್ಧ ಸಿದ್ದರಾಮಯ್ಯ ಇದೀಗ ಮತ್ತೆ ಸಿಎಂ ಆಗಿದ್ದು ಸಿದ್ದರಾಮಯ್ಯ ಸರಕಾರದಲ್ಲಿ ಬಸವ ಅಂತರಾಷ್ಟ್ರೀಯ ಕೇಂದ್ರ ಕಾಮಗಾರಿ ಪೂರ್ಣವಾಗಲಿ ಎಂದು ಜನರು ಮನವಿ ಮಾಡಿದ್ದಾರೆ. ಈ ಬಗ್ಗೆ ಹುನಗುಂದ ಶಾಸಕ ವಿಜಯಟನಂದ ಕಾಶಪ್ಪನವರು ಮಾತನಾಡಿ, 2018ರ ಅವಧಿಯಲ್ಲಿ ಸಿಎಂ ಆಗಿದ್ದ ವೇಳೆ ಹಣ ಬಿಡುಗಡೆಯಾಗಿದೆ. ಆದರೆ ಮುಂದೆ ಬಂದ ಸರಕಾರ ಹಾಗೂ ಆಗ ಹುನಗುಂದ ಶಾಸಕರಾಗಿದ್ದ ದೊಡ್ಡನಗೌಡ ಪಾಟಿಲ್ ಇದರ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!