ಸುದ್ದಿಒನ್, ಚಿತ್ರದುರ್ಗ, (ಜೂ.27) : ವಿದ್ಯಾನಗರ ವಾಸಿ ಶ್ರೀಮತಿ ಶಾಂತಮ್ಮ (69) ಇಂದು(ಮಂಗಳವಾರ) ಬೆಳಗಿನ ಜಾವ ನಿಧನರಾದರು.
ಮೃತರು ಹಾಸ್ಯ ಸಾಹಿತಿ ದಿವಂಗತ ಬಿ ತಿಪ್ಪೇರುದ್ರಪ್ಪನವರ ಧರ್ಮ ಪತ್ನಿ. ಇವರಿಗೆ ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಶಾಂತಮ್ಮ ಅವರ ಇಚ್ಚೆಯಂತೆ ನೇತ್ರದಾನ ಹಾಗೂ ದೇಹದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಈಗಾಗಲೇ ಬಸವೇಶ್ವರ ಪುನರ್ಜ್ಯೋತಿ ಐ ಬ್ಯಾಂಕ್ ಗೆ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಇಂದು ಮಧ್ಯಾಹ್ನ 3:00 ಗಂಟೆಗೆ ಶ್ರೀ ಬಸವೇಶ್ವರ ಮೆಡಿಕಲ್ ಕಾಲೇಜ್ಗೆ ದೇಹದಾನ ಮಾಡಲಾಗುವುದು ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.
ದೂರವಾಣಿ ಸಂಖ್ಯೆ : 94495 01298
ಮೃತರ ಪತಿ ತಿಪ್ಪೇಸ್ವಾಮಿಯವರು ಕೂಡಾ ಮರಣಾನಂತರ ಅವರ ದೇಹವನ್ನು ದಾನ ಮಾಡಿದ್ದರು. ಅವರಂತೆಯೇ ಶಾಂತಮ್ಮನವರು ಕೂಡಾ ದೇಹ ದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆಯನ್ನು ಮೆರೆದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















