Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕ ಕೆ.ಸಿ.ವೀರೇಂದ್ರ 49ನೇ ಹುಟ್ಟು ಹಬ್ಬ : ವಿವಿಧ ಕಾರ್ಯಕ್ರಮಗಳ ಆಯೋಜನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,(ಜೂ.28) : ಶಾಸಕರು ಕೆ. ಸಿ ವೀರೇಂದ್ರ (ಪಪ್ಪಿ) ಅವರ 49ನೇ ಹುಟ್ಟು ಹಬ್ಬದ ಆಚರಣೆಯ ಅಂಗವಾಗಿ ಜೂನ್ 30 ರಂದು ನಗರದಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಅವರ ಅಭಿಮಾನಿಗಳಾದ ಮಂಜಪ್ಪ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಜೂ. 30ಕ್ಕೆ ವಿರೇಂದ್ರ ರವರು 49 ವರ್ಷಕ್ಕೆ ಕಾಲಿಡಲಿದ್ದು, ಇದರ ಅಂಗವಾಗಿ ರಕ್ತದಾನ ಶಿಬಿರ ಸಸಿ ನೆಡುವ ಕಾರ್ಯಕ್ರಮ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು,  ಅಂದು ಬೆಳಿಗ್ಗೆ 9 ಗಂಟೆಗೆ ಚಳ್ಳಕೆರೆ ಗೇಟ್‍ನಲ್ಲಿ ಸ್ವಾಗತಿಸಲಾಗುವುದು. 9-15ಕ್ಕೆ ಸ್ಟೇಡಿಯಂ ಮುಂಭಾಗ ಬುದ್ಧನ ಪ್ರತಿಮೆಗೆ ಮಾಲಾರ್ಪಣೆ, 9-30ಕ್ಕೆ ಜಿಲ್ಲಾ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು, ಹಾಲು, ಬ್ರಡ್ ವಿತರಣೆ 10ಕ್ಕೆ ಮದಕರಿನಾಯಕ ಪ್ರತಿಮೆಗೆ ಮಾಲಾರ್ಪಣೆ 10:15 ಗಂಟೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ 10:30 ಗಂಟೆ ಒನಕೆ ಓಬವ್ವ ಪ್ರತಿಮೆಗೆ ಮಾಲಾರ್ಪಣೆ 10:45 ಗಂಟೆ ಬಡಮಾಕನ್ ದರ್ಗಾಕೆ ಭೇಟಿ 11:15 ಗಂಟೆ ನೀಲಕಂಟೇಶ್ವರ ದೇವಸ್ಥಾನ ಭೇಟಿ 11:45 ಗಂಟೆ  ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ 12ಕ್ಕೆ ಬರಗೇರಮ್ಮ ದೇವಸ್ಥಾನ ಭೇಟಿ 12.30ಕ್ಕೆ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ 12.45ಕ್ಕೆ ಮಾಳಪ್ಪನಹಟ್ಟಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ 1ಕ್ಕೆ ನಿಜಲಿಂಗಪ್ಪ ಸಮಾಧಿ ಭೇಟಿ 1.15ಕ್ಕೆ ಮುರುಘ ಮಠದಲ್ಲಿ ರಕ್ತದಾನ ಶಿಬಿರ 1.30ಕ್ಕೆ ಮುರುಘ ಮಠದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ 02:30 ಗಂಟೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸುಧಾಕರ್, ಜಿಲ್ಲೆಯ ಶಾಸಕರು ಭಾಗವಹಿಸಲಿದ್ದು ಶ್ರೀಮಠದ ಬಸವ ಪ್ರಭು ಶ್ರೀಗಳು ಸಾನಿಧ್ಯವಹಿಸಲಿದ್ದಾರೆ.

ಅಂದು ರಕ್ತದಾನ ಶಿಬಿರದಲ್ಲಿ ಸುಮಾರು 100 ಯೂನಿಟ್ ರಕ್ತವನ್ನು ಸಂಗ್ರಹ ಮಾಡುವ ಗುರಿಯನ್ನು ಹೊಂದಲಾಗಿದೆ. ಇದ್ದಲ್ಲದೆ ಶಾಸಕರ 49ನೇ ಹುಟ್ಟು ಹಬ್ಬದ ಅಂಗವಾಗಿ 49 ವಿವಿಧ ರೀತಿಯ ಸಸಿಗಳನ್ನು ಮಠದ ಆವರಣದಲ್ಲಿ ನೆಡಲಾಗುವುದು ಅಲ್ಲದೆ ಅಂದು ನಗರದ ವಿವಿಧ ವೃದ್ದಾಶ್ರಮ, ಅನಾಥಾಶ್ರಮ, ವಿಕಲ ಚೇತನರ ಆಶ್ರಮಗಳಿಗೆ ಅನ್ನದಾನವನ್ನು ಮಾಡಲಾಗುತ್ತದೆ. ಇದೆಲ್ಲವು ಸಹಾ ಶಾಸಕ ವಿರೇಂದ್ರರವರ ಅಭಿಮಾನಿಗಳ ವೃಂದವತಿಯಿಂದ ನಡೆಸಲಾಗುತ್ತಿದೆ ಎಂದು ಮಂಜಪ್ಪ ತಿಳಿಸಿದರು.

ಗೋಷ್ಠಿಯಲ್ಲಿ ಮಂಜುನಾಥ್ ಕೆ.ಆರ್. ಮಹಾಂತೇಶ್, ತಿಪ್ಪೇಸ್ವಾಮಿ, ನವೀನ್ ಕುಮಾರ್, ಶಿವರಾಜ್ ಜಾಲಿಕಟ್ಟೆ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!