Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ರೋಟರಿ ಕ್ಲಬ್ ವತಿಯಿಂದ 3 ಕೋಟಿ ವೆಚ್ಚದಲ್ಲಿ ಡಯಾಲೀಸಿಸ್ ಕೇಂದ್ರದ ಶಿಲಾನ್ಯಾಸ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, (ಜೂ.28) : ಆರೋಗ್ಯ, ಶಿಕ್ಷಣ ಮತ್ತು ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಕ್ಲಬ್ ಉತ್ತಮವಾದ ಪಾತ್ರವನ್ನು ವಹಿಸಿದೆ ಎಂದು 3160 ಜಿಲ್ಲಾ ಗೌರ್ನರ್ ವೇಮನ ಸತೀಶ್ ಬಾಬು ತಿಳಿಸಿದರು.

ನಗರದ ಎಸ್.ಆರ್.ಬಿ.ಎಂ.ಎಸ್. ರೋಟರಿಕ್ಲಬ್ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುಮಾರು 3 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಯಾಲೀಸಿಸ್ ಕೇಂದ್ರದ ಶಿಲಾನ್ಯಾಸ ಕಾರ್ಯಕ್ರಮ ಮತ್ತು ರೋಟರಿ ಕ್ಲಬ್‍ನ ಸಂಸ್ಥಾಪಕರ ಪ್ರತಿಮೆ ಅನಾವರಣ ನೇರವೇರಿಸಿ ಮಾತನಾಡಿದರು.

ರೋಟರಿ ಕ್ಲಬ್ ಉತ್ತಮವಾದ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಜನರ ಮನಸ್ಸಿನಲ್ಲಿ ಇದೆ. ಜನತೆಗೆ ಅಗತ್ಯವಾಗಿ ಬೇಕಾದ ಆರೋಗ್ಯ, ಶಿಕ್ಷಣ, ಅರಿವು, ಮಕ್ಕಳ ಕಲಿಕೆಗೆ ನೇರವು, ವಿಕಲಚೇತನರಿಗೆ ಸಹಾಯ ಸೇರಿದಂತೆ ಇತರೆ ವಿವಿಧ ರೀತಿಯ ಸಹಾಯವನ್ನು ಮಾಡುತ್ತಿದೆ.

ಈ ರೀತಿಯ ಉತ್ತಮವಾದ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿರುವುದರಿಂದ ನಮ್ಮ ಕ್ಲಬ್‍ಗೆ ಚಾರಿಟಿ ನೇಮಿಗೇಷನ್‍ನಿಂದ ಉತ್ತಮವಾದ ರೇಟಿಗೆ ಸಿಕ್ಕಿದೆ ಈ ಸಂಸ್ಥೆ ಪ್ರಪಂಚದಲ್ಲಿ ಚಾಲ್ತಿಯಲ್ಲಿದ್ದು, 35000 ಕ್ಲಬ್‍ಗಳನ್ನು ಹೊಂದಿದ್ದು, 14 ಲಕ್ಷ ಸದಸ್ಯರನ್ನು ಒಳಗೊಂಡಿದೆ ಎಂದರು.

ರೋಟೇರಿಯನ್ ವೀರಭದ್ರಸ್ವಾಮಿ ಮಾತನಾಡಿ ಚಿತ್ರದುರ್ಗ ರೋಟರಿ ಕ್ಲಬ್‍ವತಿಯಿಂದ ಜನಗಳ ಅನೂಕೂಲಕ್ಕಾಗಿ ಚಳ್ಳಕೆರೆ ರಸ್ತೆಯಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ಡಯಾಲಿಸಿಸಿ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ವೈದ್ಯಕೀಯ ಸೌಲಭ್ಯ ಜನೋಷಧಿ, ಡಯಾಲಿಸಿಸಿ ಕೇಂದ್ರ ಸ್ಥಾಪನೆಯಾಗಲಿದೆ, ಇದ್ದಲ್ಲದೆ ಮುಂದಿನ ದಿನಮಾನದಲ್ಲಿ ರಕ್ತ ನಿಧಿ ಮತ್ತು ಕಣ್ಣಿನ ಕೇಂದ್ರವನ್ನು ಸ್ಥಾಪನೆ ಮಾಡಲು ಸಹಾ ನಿರ್ಧಾರವನ್ನು ಮಾಡಲಾಗಿದೆ ಎಂದರು.

ಅಸಿಸ್ಟೆಂಟ್ ಗೌರ್ನರ್ ಶ್ರೀಮತಿ ಗಾಯತ್ರಿ ಶಿವರಾಂ ಮಾತನಾಡಿ, ರೋಟರಿ ಕ್ಲಬ್ ಉತ್ತಮವಾದ ಕಾರ್ಯವನ್ನು ಮಾಡುತ್ತಿದೆ, ಇದು ಹೀಗೇಯೇ ಮೂಂದುವರೆಯಬೇಕಿದೆ, ಈಗಿನ ಪದಾಧಿಕಾರಿಗಳು ತಮ್ಮ ಒಂದು ವರ್ಷದ ಅವಧಿಯಲ್ಲಿ ಜನಪಯೋಗಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ ಮುಂದಿನ ಪದಾಧಿಕಾರಿಗಳು ಸಹಾ ಇದೇ ರೀತಿ ಉತ್ತಮವಾದ ಕಾರ್ಯವನ್ನು ಮಾಡಲಿ ಎಂದು ಆಶಿಸಿ ಮುಂದಿನ 2-3 ತಿಂಗಳಲ್ಲಿ ರೋಟರಿ ಕ್ಲಬ್ ಡಯಾಲೀಸಿಸಿ ಕೇಂದ್ರ ತನ್ನ ಕಾರ್ಯವನ್ನು ಪ್ರಾರಂಭ ಮಾಡಲಿದೆ ಇದರಿಂದ ಬಡ ಜನರಿಗೆ ಅನುಕೂಲವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಮಾಧುರಿ ಮಧುಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಷಾ, ರೋಟರಿ ಟ್ರಸ್ಟ್ ಅಧ್ಯಕ್ಷರಾದ ಶುಭುಲಿಂಗಪ್ಪ, ಪಿಡಿಜಿ ಮಧುಪ್ರಸಾದ್, ಟಿಜಿಎಂ ರವೀಂದ್ರ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!