Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೋಟರಿ ಕ್ಲಬ್‌ನ ಅಧ್ಯಕ್ಷೆಯಾಗಿ ಒಂದು ವರ್ಷದ ಸೇವೆ ತೃಪ್ತಿ ತಂದಿದೆ : ಶ್ರೀಮತಿ ಮಾಧುರಿ ಮಧುಪ್ರಸಾದ್

Facebook
Twitter
Telegram
WhatsApp

ಚಿತ್ರದುರ್ಗ,(ಜೂ.30) : ಕಳೆದ ಒಂದು ವರ್ಷದಿಂದ ರೋಟರಿ ಕ್ಲಬ್‌ನ ಅಧ್ಯಕ್ಷರಾಗಿ ಆರೋಗ್ಯ, ಶಿಕ್ಷಣದಂತಹ ವಿವಿಧ ಜನಪಯೋಗಿ ಕಾರ್ಯಗಳನ್ನು ಮಾಡಿದ್ದು ಇದರಲ್ಲಿ ನನಗೆ ತೃಪ್ತಿ ತಂದಿದೆ ಎಂದು ರೋಟರಿ ಕ್ಲಬ್‌ನ ಅಧ್ಯಕ್ಷರಾದ ಶ್ರೀಮತಿ ಮಾಧುರಿ ಮಧುಪ್ರಸಾದ್ ತಿಳಿಸಿದರು.

ನಗರದ  ಎಸ್.ಆರ್.ಬಿ.ಎಂ.ಎಸ್. ರೋಟರಿ ಬಾಲ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 2022-23ನೇ ಸಾಲಿನ ಪದಾಧಿಕಾರಿಗಳ ಅವಧಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಾರಂಭದಲ್ಲಿ ಅಧ್ಯಕ್ಷರಾದಾಗ ತುಂಬ ಭಯವಾಗಿತ್ತು. ಆದರೆ ತದ ನಂತರ ನಮ್ಮ ಸಂಘದ ಪದಾಧಿಕಾರಿಗಳ ಸಹಕಾರದಿಂದ ನಗರದ ಜನತೆಗಾಗಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವುಗಳನ್ನು ಜಾರಿ ಮಾಡಿ ಅರ್ಹರಿಗೆ ತಲುಪಿಸಲಾಯಿತು ಎಂದರು.

ಈ ವರ್ಷದಲ್ಲಿ ಸುಮಾರು 150 ಕಾರ್ಯಕ್ರಮಗಳನ್ನು ಮಾಡಲಾಗಿದೆ.ಇದರಲ್ಲಿ ಆರೋಗ್ಯ, ಶಿಕ್ಷಣ, ದಂತ ಶಿಬಿರ, ಅಪೌಷ್ಟಿಕತೆಯ 120 ಮಕ್ಕಳಿಗೆ ಪೌಷ್ಟಿಕತೆಯ ಆಹಾರ ವಿತರಣೆ, ಪಶು ಚಿಕಿತ್ಸಾ ಶಿಬಿರ, ಜನರಿಗಾಗಿ ಆರೋಗ್ಯ ತಪಾಸಣಾ ಶಿಬಿರ, ಮಕ್ಕಳಲ್ಲಿ ಆತ್ಮಹತ್ಯೆಯನ್ನು ತಡೆಯುವ ಸಲುವಾಗಿ ವಿವಿಧ ಕಾಲೇಜಿನಲ್ಲಿ ತಜ್ಞರಿಂದ ಉಪನ್ಯಾಸ, ಕೋವಿಡ್ ಲಸಿಖಾ ಕಾರ್ಯಕ್ರಮ, ಕ್ಯಾನ್ಸ್‌ರ್ ತಪಾಸಣಾ ಶಿಬಿರ, ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ವಿತರಣಾ ಕಾರ್ಯಕ್ರಮ, ವಿವಿಧ ಸರ್ಕಾರಿ ಶಾಲೆಗಳಿಗೆ ಶಾಲಾ ಬೆಂಚುಗಳ ವಿತರಣೆ, ಉತ್ತಮ ಶಿಕ್ಷಕರುಗಳಿಗೆ ಪ್ರಶಸ್ತ್ರಿ ಪ್ರಧಾನ, ಇದ್ದಲ್ಲದೆ ಶಿಕ್ಷಕರುಗಳಿಗೆ ತರಬೇತಿ, ಮಕ್ಕಳ ಪ್ರತಿಭಾ ಪುರಸ್ಕಾರ, ದಂಡಿನ ಕುರುಬರ ಹಟ್ಟಿ ಸರ್ಕಾರಿ ಶಾಲೆಗೆ 2 ಲಕ್ಷ ರೂ ಮೌಲ್ಯದ ವಿವಿಧ ರೀತಿಯ ಉಪಕರಣಗಳ ಕೂಡುಗೆ, ಕ್ಲಬ್‌ನ ಪದಾಧಿಕಾರಿಗಳಿಗಾಗಿ ವಿವಿಧ ರೀತಿಯ ಕ್ರೀಡಾಕೂಟ, ಸಂಗೀತ ಸಂಜೆ, ಯೋಗ ದಿನಾಚರಣೆ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು ಎಂದರು.

ರೋಟರಿ ಕ್ಲಬ್ ಕನಸಿನ ಕೂಸಾದ ಡಯಾಲಿಸಿಸಿ ಕೇಂದ್ರ ಸ್ಥಾಪನೆ ಇದರ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸುವುದರ ಮೂಲಕ ನನ್ನ ಅವಧಿಯಲ್ಲಿಯೇ ಕೇಂದ್ರವನ್ನು ಸ್ಥಾಪನೆ ಮಾಡಬೇಕೆಂದು ತೀರ್ಮಾನಿಸಲಾಯಿತು. ಅದರೆ ಇನ್ನು ಸ್ವಲ್ಪ ಕೆಲಸ ಬಾಕಿ ಇರುವುದರಿಂದ ಮುಂದಿನ ದಿನದಲ್ಲಿ ಇದರ ಉದ್ಘಾಟನೆ ಕಾರ್ಯ ನಡೆಯಲಿದೆ.

ಸುಮಾರು 3 ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಾಣ ಮಾಡಲಾಗುತ್ತಿದೆ ಇದಕ್ಕೆ ಅಗತ್ಯವಾಗಿ ಬೇಕಾದ ಡಯಾಲಿಸಿಸಿ ಯಂತ್ರಗಳನ್ನು ಸಹಾ ದಾನಿಗಳಿಂದ ತರಲಾಗುತ್ತಿದೆ. ಈ ಕಟ್ಟಡದ ಮೇಲೆ ರಕ್ತ ನಿಧಿ ಮತ್ತು ಕಣ್ಣಿನ ಸಂಗ್ರಹ ಕೇಂದ್ರವನ್ನು ಪ್ರಾರಂಭ ಮಾಡುವ ಬಗ್ಗೆಯೂ ಸಹಾ ಚಿಂತನೆ ನಡೆದಿದೆ ಎಂದು ಮಾಧುರಿ ಮಧುಪ್ರಸಾದ್ ತಿಳಿಸಿದರು.

ಕ್ಲಬ್ ನ ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಷಾ ಮಾತನಾಡಿ ನಮ್ಮ ಒಂದು ವರ್ಷದ ಅವಧಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ರೀತಿಯ ಕಾರ್ಯಕ್ರಮಗಳಿಗೆ ಎಲ್ಲಾ ಸದಸ್ಯರು ತನು.ಮನು, ಧನದೊಂದಿಗೆ ಸಹಾಯವನ್ನು ಮಾಡಿದ್ದಾರೆ. ಮುಂದಿನ  ದಿನದಲ್ಲಿಯೂ ಸಹಾ ಇದೇ ರೀತಿ ಸಹಕಾರವನ್ನು ನೀಡುವುದರ ಮೂಲಕ ಕ್ಲಬ್‌ನ ಬೆಳವಣಿಗೆಯಲ್ಲಿ ಸಹಾಯ ಮಾಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅಸಿಸ್ಟೆಂಟ್ ಗೌರ‍್ನರ್ ಶ್ರೀಮತಿ ಗಾಯತ್ರಿ ಶಿವರಾಂ, ಪಿ.ಡಿ.ಜಿ. ಕೆ.ಮದುಪ್ರಸಾದ್, ಪಿ.ಎಚ್.ಎಫ್. ಎಂ.ಕೆ.ರವೀಂದ್ರ ಭಾಗವಹಿಸಿದ್ದರು. ಶ್ರೀಮತಿ ಉಮಾ ರಾಮಾಂಜುನೇಯ ಪ್ರಾರ್ಥಿಸಿದರೆ ಲಕ್ಷ್ಮಣ್ ಕಾರ್ಯಕ್ರಮ ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!