Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ : 48 ಮಂದಿ ಸಾವು

Facebook
Twitter
Telegram
WhatsApp

ಸುದ್ದಿಒನ್

ಆಫ್ರಿಕಾದ ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ನಿಯಂತ್ರಣ ತಪ್ಪಿ ವಾಹನಗಳಿಗೆ ಗುದ್ದಿ ಪಾದಚಾರಿಗಳ ಮೇಲೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಈ ಅಪಘಾತದಲ್ಲಿ ಕನಿಷ್ಠ 48 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ ಪಶ್ಚಿಮ ಕೀನ್ಯಾದ ಜನನಿಬಿಡ ಲೊಂಡಿಯಾನಿ ಜಂಕ್ಷನ್‌ನಲ್ಲಿ ಅಪಘಾತ ಸಂಭವಿಸಿದೆ.

ಟ್ರಕ್ ನಿಯಂತ್ರಣ ತಪ್ಪಿ ಇತರ ವಾಹನಗಳಿಗೆ ಡಿಕ್ಕಿ ಹೊಡೆದು ಪಾದಚಾರಿಗಳ ಮೇಲೆ ಹರಿದಿದೆ. ಇದರಿಂದ ಹತ್ತಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದುವರೆಗೆ 48 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸ್ ಕಮಾಂಡರ್ ಜೆಫ್ರಿ ಮಾಯೆಕ್ ಹೇಳಿದ್ದಾರೆ.

ಇನ್ನೂ 30 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅಪಘಾತಕ್ಕೆ ಕಾರಣವಾದ ಲಾರಿಯಲ್ಲಿ ಒಬ್ಬಿಬ್ಬರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಅಪಘಾತ ಸ್ಥಳದಲ್ಲಿ ಪ್ರತಿಕೂಲ ವಾತಾವರಣವಿದ್ದು, ಟ್ರಕ್ ಡಿಕ್ಕಿಯಾಗಿ ಹಲವು ಮಿನಿ ಬಸ್ಸುಗಳು ನಜ್ಜುಗುಜ್ಜಾಗಿವೆ. ವಾಹನಗಳೊಳಗೆ ಸಿಲುಕಿರುವ ಜನರನ್ನು ಬಹಳ ಕಷ್ಟಪಟ್ಟು ಹೊರ ತೆಗೆಯಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ 30 ಜನರನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಕಮಾಂಡರ್ ತಿಳಿಸಿದ್ದಾರೆ.  ಕೆರಿಚೋ ಮತ್ತು ನಕುರು ಪಟ್ಟಣಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ಕೆರಿಚೋ ಕಡೆಗೆ ಹೋಗುತ್ತಿದ್ದ ಟ್ರಕ್ ನಿಯಂತ್ರಣ ಕಳೆದುಕೊಂಡು ಎಂಟು ಮಿನಿ ಬಸ್‌ಗಳು, ಹಲವಾರು ದ್ವಿಚಕ್ರ ವಾಹನಗಳು ಮತ್ತು ರಸ್ತೆ ಬದಿಯಲ್ಲಿದ್ದ ಜನರಿಗೆ ಡಿಕ್ಕಿ ಹೊಡೆದಿದೆ ಎಂದು ರಿಫ್ಟ್ ವ್ಯಾಲಿ ಪ್ರಾದೇಶಿಕ ಪೊಲೀಸ್ ಕಮಾಂಡರ್ ಟಾಮ್ ಬೊಯೊ ಓಡೆರೊ ಹೇಳಿದ್ದಾರೆ. ಘಟನೆಯ ಬಗ್ಗೆ ಕೀನ್ಯಾ ಅಧ್ಯಕ್ಷ ವಿಲಿಯಂ ರುಟೊ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಕೀನ್ಯಾದ ಸಾರಿಗೆ ಸಚಿವ ಕಿಪ್ಶುಂಬಾ ಮುರ್ಕೊಮೆನ್ ಘೋಷಿಸಿದ್ದಾರೆ.

ಕೆರಿಚೋ ಕೌಂಟಿ ಆಸ್ಪತ್ರೆಯ ಹಿರಿಯ ಡಾ. ಕಾಲಿನ್ಸ್ ಅವರು 45 ಮೃತ ದೇಹಗಳನ್ನು ತಮ್ಮ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ  ಮತ್ತು ಕೆಲವನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!