Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಕ್ಷದಿಂದ ಶೋಕಾಸ್ ನೋಟೀಸ್.. ತಮ್ಮ ಶಿಷ್ಯಗೆ ಕಿವಿ ಮಾತು ಹೇಳಿದ ಬಿಎಸ್ವೈ..!

Facebook
Twitter
Telegram
WhatsApp

ಬೆಂಗಳೂರು: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಇತ್ತೀಚೆಗೆ ಬಿಜೆಪಿ ಮೇಲೆ ಬಹಿರಂಗವಾಗಿಯೇ ಹೌಹಾರಿದ್ದಾರೆ. ಇದು ಬಿಜೆಪಿ ನಾಯಕರಿಗೆ ಮುಜುಗರ ತಂದಿದೆ. ಹೀಗಾಗಿ ಬಿಎಸ್ ಯಡಿಯೂರಪ್ಪ ಮೂಲಕ ಅವರನ್ನು ಸರಿದಾರಿಗೆ ತರುವುದಕ್ಕೆ ಯತ್ನಿಸಿದ್ದಾರೆ. ಅದರಂತೆ ಇಂದು ಮಾಜಿ ಸಿಎಂ ಬಿಎಸ್ವೈ, ರೇಣುಕಾಚಾರ್ಯ ಅವರನ್ನು ಕರೆದು ಬುದ್ದಿ ಮಾತು ಹೇಳಿದ್ದಾರೆ.

ತಮ್ಮ ಮನೆಗೆ ರೇಣುಕಾಚಾರ್ಯ ಅವರನ್ನು ಕರೆಸಿಕೊಂಡ ಬಿಎಸ್ ಯಡಿಯೂರಪ್ಪ ಅವರು ಕಿವಿ ಮಾತು ಹೇಳಿದ್ದಾರೆ. ಚುನಾವಣೆಯಲ್ಲಿ ನಮಗೆ ಸೋಲಾಗಿರೋದು ನಿಜ. ಪಕ್ಷದಲ್ಲಿ ಸಣ್ಣಪುಟ್ಟ ಆಂತರಿಕ ಸಮಸ್ಯೆಗಳು ಇರೋದು ನಿಜ. ಆದರೆ ನಾವು ಅದನ್ನು ಪಕ್ಷದ ವೇದಿಕೆಯಲ್ಲಿ ಕೂತು ಸರಿಪಡಿಸಿಕೊಳ್ಳಬೇಕೇ ವಿನಃ ಬಹಿರಂಗವಾಗಿ ಹೇಳಿಕೆ ನೀಡಬಾರದು. ಇದರಿಂದ ಪಕ್ಷಕ್ಕೆ ಮುಜುಗರ ಆಗಲಿದೆ ಎಂದು ಯಡಿಯೂರಪ್ಪ ಕಿವಿ ಮಾತು ಹೇಳಿದ್ದಾರೆ ಎನ್ನಲಾಗಿದೆ.

ಇನ್ನು ಮಾಜಿ ಶಾಸಕ ರೇಣುಕಾಚಾರ್ಯ ಬಸವರಾಜ್ ಬೊಮ್ಮಾಯಿ, ಅಣ್ಣಾಮಲೈ ವಿರುದ್ಧ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಪಕ್ಷದ ಶಿಸ್ತು ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಶೋಕಾಸ್ ನೋಟೀಸ್ ಜಾರಿ‌ ಮಾಡಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!