Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಕ್ಷದಿಂದ ಶೋಕಾಸ್ ನೋಟೀಸ್.. ತಮ್ಮ ಶಿಷ್ಯಗೆ ಕಿವಿ ಮಾತು ಹೇಳಿದ ಬಿಎಸ್ವೈ..!

---Advertisement---

ಬೆಂಗಳೂರು: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಇತ್ತೀಚೆಗೆ ಬಿಜೆಪಿ ಮೇಲೆ ಬಹಿರಂಗವಾಗಿಯೇ ಹೌಹಾರಿದ್ದಾರೆ. ಇದು ಬಿಜೆಪಿ ನಾಯಕರಿಗೆ ಮುಜುಗರ ತಂದಿದೆ. ಹೀಗಾಗಿ ಬಿಎಸ್ ಯಡಿಯೂರಪ್ಪ ಮೂಲಕ ಅವರನ್ನು ಸರಿದಾರಿಗೆ ತರುವುದಕ್ಕೆ ಯತ್ನಿಸಿದ್ದಾರೆ. ಅದರಂತೆ ಇಂದು ಮಾಜಿ ಸಿಎಂ ಬಿಎಸ್ವೈ, ರೇಣುಕಾಚಾರ್ಯ ಅವರನ್ನು ಕರೆದು ಬುದ್ದಿ ಮಾತು ಹೇಳಿದ್ದಾರೆ.

ತಮ್ಮ ಮನೆಗೆ ರೇಣುಕಾಚಾರ್ಯ ಅವರನ್ನು ಕರೆಸಿಕೊಂಡ ಬಿಎಸ್ ಯಡಿಯೂರಪ್ಪ ಅವರು ಕಿವಿ ಮಾತು ಹೇಳಿದ್ದಾರೆ. ಚುನಾವಣೆಯಲ್ಲಿ ನಮಗೆ ಸೋಲಾಗಿರೋದು ನಿಜ. ಪಕ್ಷದಲ್ಲಿ ಸಣ್ಣಪುಟ್ಟ ಆಂತರಿಕ ಸಮಸ್ಯೆಗಳು ಇರೋದು ನಿಜ. ಆದರೆ ನಾವು ಅದನ್ನು ಪಕ್ಷದ ವೇದಿಕೆಯಲ್ಲಿ ಕೂತು ಸರಿಪಡಿಸಿಕೊಳ್ಳಬೇಕೇ ವಿನಃ ಬಹಿರಂಗವಾಗಿ ಹೇಳಿಕೆ ನೀಡಬಾರದು. ಇದರಿಂದ ಪಕ್ಷಕ್ಕೆ ಮುಜುಗರ ಆಗಲಿದೆ ಎಂದು ಯಡಿಯೂರಪ್ಪ ಕಿವಿ ಮಾತು ಹೇಳಿದ್ದಾರೆ ಎನ್ನಲಾಗಿದೆ.

ಇನ್ನು ಮಾಜಿ ಶಾಸಕ ರೇಣುಕಾಚಾರ್ಯ ಬಸವರಾಜ್ ಬೊಮ್ಮಾಯಿ, ಅಣ್ಣಾಮಲೈ ವಿರುದ್ಧ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಪಕ್ಷದ ಶಿಸ್ತು ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಶೋಕಾಸ್ ನೋಟೀಸ್ ಜಾರಿ‌ ಮಾಡಲಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment