Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಎಸ್‍ಆರ್ ಎಸ್ ಹೆರಿಟೇಜ್‌ ಶಾಲೆಯಲ್ಲಿ ಸಂಭ್ರಮದಿಂದ ನೆರವೇರಿದ ಗುರುಪೂರ್ಣಿಮಾ ಕಾರ್ಯಕ್ರಮ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ,(ಜು.03) :  ನಗರದ ಎಸ್‍ಆರ್ ಎಸ್ ಹೆರಿಟೇಜ್ ಶಾಲೆಯ “ಅನಂತಕೃಷ್ಣ ಬೃಹತ್ ಸಭಾಂಗಣದಲ್ಲಿ” ಗುರುಪೂರ್ಣಿಮಾ  ಕಾರ್ಯಕ್ರಮ ನಡೆಯಿತು.

“ಎಸ್‍ಆರ್‍ಎಸ್ ಶಿಕ್ಷಣ ಸಮೂಹ ಸಂಸ್ಥೆಯ”ಕಾರ್ಯದರ್ಶಿ ಶ್ರೀಮತಿ ಸುಜಾತ ಲಿಂಗಾರೆಡ್ಡಿಯವರು ಹಾಗೂ “ಎಸ್‍ಆರ್‍ಎಸ್ ಶಿಕ್ಷಣ ಸಮೂಹ ಸಂಸ್ಥೆಯ” ಮಾರ್ಗದರ್ಶಕರಾದ ಶ್ರೀಮತಿ ಲಿಖಿತ ಅಮೋಘ್‍ರವರು ಗಣಪತಿ ಮತ್ತು ಶಾರದ ಪೂಜೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಎಸ್‍ಆರ್‍ಎಸ್ ಶಿಕ್ಷಣ ಸಮೂಹ ಸಂಸ್ಥೆಯ” ಮಾರ್ಗದರ್ಶಕರಾದ ಶ್ರೀಮತಿ ಲಿಖಿತ ಅಮೋಘ್‍ರವರು ಮಾತನಾಡಿ ಮನುಷ್ಯನ ಜೀವನದಲ್ಲಿ ಗುರುವು ಮಹತ್ವದ ಪಾತ್ರ ವಹಿಸುತ್ತಾರೆ. ಹಿಂದೂ ಧರ್ಮದಲ್ಲಿ ಗುರುಪೂರ್ಣಿಮೆಗೆ ಬಹಳ ಪ್ರಾಮುಖ್ಯತೆ ಇದೆ. ಆಷಾಢ ಮಾಸದ ಹುಣ್ಣಿಮೆಯಂದು ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಗುರುವನ್ನು ದೇವರಂತೆ ಪೂಜಿಸುವ ಸಂಸ್ಕøತಿ ನಮ್ಮ ದೇಶದಲ್ಲಿದೆ ಹಾಗಾಗಿ ಗುರುಪೂರ್ಣಿಮೆ ಬಹಳ ಮಹತ್ವದ ದಿನವಾಗಿದೆ ಎಂದು ಗುರುವಿನ ಮಹತ್ವ ತಿಳಿಸಿದರು.

ಎಸ್‍ಆರ್‍ಎಸ್ ಶಿಕ್ಷಣ ಸಮೂಹ ಸಂಸ್ಥೆಯ” ಉಪಾಧ್ಯಕ್ಷ ಅಮೋಘ್ ಬಿ ಎಲ್ ಕಾರ್ಯಕ್ರವನ್ನು ಕುರಿತು ಪ್ರಶಂಶಿಸಿದ್ದಾರೆ.

ಶಾಲೆಯ ಪ್ರಾಂಶುಪಾಲ ಪ್ರಭಾಕರ್ ಎಂ.ಎಸ್ ಕಾರ್ಯಕ್ರಮ ಕುರಿತು ಮಾತನಾಡಿ ಓಂ ಶ್ರೀ ಗುರುಭ್ಯೋ ನಮಃ, ಗುರುಬ್ರಹ್ಮ ಗುರುರ್ವಿಷ್ಣು ಗುರುರ್ದೇವೋ ಮಹೇಶ್ವರಃ ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ ಸರ್ವರಿಗೂ ಗುರುಪೂರ್ಣಿಮೆಯ ಶುಭಾಷಯಗಳನ್ನು ಹೇಳುತ್ತಾ ಈ ದಿನ ಗುರು ಸೂತ್ರದ ಪ್ರಭಾವ ಇತರ ದಿನಗಳಿಗಿಂತ ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಗುರು ಅಂದರೆ ಅಜ್ಞಾನ ದೂರ ಮಾಡುವವರು ಎಂದರ್ಥ.

ಬಹುತೇಕ ಜನರು ಗುರುವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಪರಿಗಣಿಸುತ್ತಾರೆ. ಈ ದಿನ ಹಲವರು ತಮ್ಮ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಾಗಿದೆ. ಗುರು ಪೂರ್ಣಿಮೆಗೆ ಧಾರ್ಮಿಕ ಪ್ರಾಮುಖ್ಯತೆ ಅಲ್ಲದೆ ಶೈಕ್ಷಣಿಕ ಮತ್ತು ವಿದ್ವಾಂಸರ ವೃಂದದಲ್ಲೂ ಮಹತ್ವ ಇದೆ ಎಂದು ನೆರೆದ ವಿದ್ಯಾರ್ಥಿಗಳಿಗೆ ತಿಳಿಸಿದರು.

ಪ್ರತಿ ವರ್ಷ ಆಷಾಡ ಮಾಸದ ಶುಕ್ಲಪಕ್ಷದ ಹುಣ್ಣಿಮೆಯ ದಿನ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಈ  ಕಾರ್ಯಕ್ರಮದಲ್ಲಿ ಶಾಲೆಯ 3 ರಿಂದ 6ನೆ ತರಗತಿಯ ಸರಿಸುಮಾರು 1000 ಕ್ಕೂ ಹೆಚ್ಚು ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸರಿಸುಮಾರು 1000 ಕ್ಕೂ ಹೆಚ್ಚು ಮಕ್ಕಳು ಉತ್ಸಾಹಭರಿತವಾಗಿ ತಮ್ಮ ಪೋಷಕರ ಪಾದಪೂಜೆ ಮಾಡುವ ಮೂಲಕ ಅವರ ಆಶೀರ್ವಾದಕ್ಕೆ ಪಾತ್ರರಾದರು. ಹಾಗೂ ಮಕ್ಕಳು ತಮ್ಮ ಗುರುಗಳ ಆಶೀರ್ವಾದವನ್ನು  ಪಡೆದರು. ಗುರುಗಳ ಸ್ಥಾನವು ದೇವರಿಗೆ ಸಮಾನ ಎಂದು ಹೇಳಲಾಗುತ್ತದೆ. ಜೀವನದ ನಿಜವಾದ ಮಾರ್ಗತೋರಿಸಲು ಗುರುಗಳು ಸಹಾಯ ಮಾಡುತ್ತಾರೆ. ಈ ದಿನ ಜನಿಸಿದ ವೇದವ್ಯಾಸರು ವೇದಗಳನ್ನು ರಚಿಸಿದ ಪವಿತ್ರ ದಿನ ಈ ಮೂಲಕ  ಜಗತ್ತಿಗೆ ಜ್ಞಾನವನ್ನು ಹರಡಿದರು.

ಈ ಕಾರ್ಯಕ್ರಮ ಆಚರಣೆಯ ಮೂಲಕ ಭಾರತೀಯ ಸಂಸ್ಕೃತಿ, ಪರಂಪರೆ, ಸಂಸ್ಕಾರ ಮತ್ತು ಹಿಂದಿನ ಗುರುಕುಲ ಶಿಕ್ಷಣವನ್ನು ಮರುಕಳಿಸುವುದು ಹಾಗೂ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳಸುವುದಾಗಿದೆ. ಸಂಸ್ಕೃತ ಶ್ಲೋಕಗಳನ್ನು ಮಕ್ಕಳಿಗೆ ಪರಾಯಣ ಮಾಡಿಸಿದರು.

ಕಾರ್ಯಕ್ರಮದಲ್ಲಿ ಪೋಷಕರು ಭಾಗವಹಿಸಿ ತಮ್ಮ ಮಕ್ಕಳಿಗೆ ಆಶೀರ್ವದಿಸಿದರು. ಈ ದಿನದ ವಿಶೇಷತೆ ಬಗ್ಗೆ ಪೋಷಕರು ತಮ್ಮ ಭಾವನೆಗಳನ್ನು ಹಾಗೂ ಅನುಭವವನ್ನು ಅಭಿಪ್ರಾಯಗಳೊಂದಿಗೆ  ಹಂಚಿಕೊಂಡರು.

ಶೈಕಣಿಕ ಸಂಯೋಜಕಿ ಶ್ರೀಮತಿ ರೋಹಿನ ಟಿ. ಮತ್ತು ಜಗದೀಶ್, ಸಿಸಿಎ ಸಂಯೋಜಕರಾದ ಸುನೀಲ್ ಭಟ್, ಲುಬ್ನಾ ಕೌಸರ್ ಸಂಸ್ಕøತ ಗುರುವೃಂದ, ಬೋಧಕ ವರ್ಗ ಹಾಗೂ ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

20% ಗ್ರೇಸ್ ಮಾರ್ಕ್ಸ್ ಕೊಟ್ಟರು ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಯಾಕೆ..?

ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಮೂಲಿಯಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡರೆ ಈ ಬಾರಿ ಫಲಿತಾಂಶ ತೀರಾ ಕಡಿಮೆ ಬಂದಿದೆ. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ

ನಿವೇದಿತಾ ಜೈನ್ ಸಾವಿನ ಬಗ್ಗೆ ಮೊದಲೇ ಎಚ್ಚರಿಸಿದ್ದರು ಆ ಮನುಷ್ಯ.. ಮನೆಯು ಸಿಗಲಿಲ್ಲ.. ನಟಿಯೂ ಉಳಿಯಲಿಲ್ಲ..!

ನಿವೇದಿತಾ ಜೈನ್ ಬದುಕಿದ್ದು ಕೇವಲ 19 ವರ್ಷ. ಆದರೆ ಹಲವು ಸಿನಿಮಾಗಳಲ್ಲಿ ನಟಿಸಿ, ಎಲ್ಲರನ್ನು ಬಿಟ್ಟು ಹೊರಟೆ ಹೋದರು. ಇಂದಿಗೂ ಅವೆ ಸಾವು ಆತ್ಮಹತ್ಯೆಯೋ, ಸಹಜ ಸಾವೋ ಎಂಬ ಪ್ರಶ್ನೆ ಕಾಡುತ್ತದೆ. ನಿವೇದಿತಾ ಜೈನ್

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

ಬೆಂಗಳೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಲಿಂಗವಾರು ಒಟ್ಟಾರೆ ಫಲಿತಾಂಶ: ಬಾಲಕರು:2,87,416(65.90%) ಬಾಲಕಿಯರು’-3,43,788(81.11%) ರಾಜ್ಯದಲ್ಲಿ

error: Content is protected !!