Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿದ್ಧೇಶ್ ಯಾದವ್ ನಿಧನ : ಗಣ್ಯರ ಸಂತಾಪ, ನಾಳೆ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ…!

---Advertisement---

ಸುದ್ದಿಒನ್, ಚಿತ್ರದುರ್ಗ, (ಜು.03) : ಭಾರತೀಯ ಜನತಾ ಪಾರ್ಟಿಯ ಬಳ್ಳಾರಿ ವಿಭಾಗದ ಪ್ರಬಾರಿ ಸಿದ್ಧೇಶ್ ಯಾದವ್ (49) ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಛೇರಿಯಲ್ಲಿ ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

ಇಂದು ಮಧ್ಯಾನ್ಹ ಬೆಂಗಳೂರಿನ ಪಕ್ಷದ ಕಛೇರಿಯಲ್ಲಿ ಪಕ್ಷದ ಸಭೆ ನಡೆಯುತ್ತಿರುವಾಗಲೇ ಹೃದಯಾಘಾತವಾಗಿದೆ
ತಕ್ಷಣವೇ ಅವರನ್ನು ಹತ್ತಿರದ ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಎಬಿವಿಪಿಯಲ್ಲಿ 1988 ರಿಂದ ಕಾರ್ಯ ನಿರ್ವಹಿಸಿದ್ದು, ನಗರ ಕಾರ್ಯದರ್ಶಿ, ರಾಜ್ಯ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾ ಪ್ರಮುಖರಾಗಿ ಕಾರ್ಯನಿರ್ವಹಿಸಿದ್ದು, ನಂತರ ಬಿಜೆಪಿಯನ್ನು ಸೇರಿದ ಅವರು ಇದರಲ್ಲಿ ಎನ್.ಜಿ.ಓ.ರಾಜ್ಯ ಸಹ ಸಂಚಾಲಕರಾಗಿ, ಚಿತ್ರದುರ್ಗ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ, 2008 ರಿಂದ 2011ರವರೆಗೆ ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ, 2013ರಲ್ಲಿ ಬಿಜೆಪಿಯಿಂದ ಹಿರಿಯೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ, ರಾಜ್ಯ ಓಬಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಸ್ಲಂ ಮೋರ್ಚಾ ಉಪಾಧ್ಯಕ್ಷರಾಗಿ ಈಗ ಹಾಲಿ ಬಳ್ಳಾರಿ ವಿಭಾಗದ ಪ್ರಬಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಸೇರಿದಂತೆ ಆಪಾರ ಬಂಧು ಬಳಗವನ್ನು ಆಗಲಿದ್ದಾರೆ. ಎಂ.ಎ.ಪದವೀದರರರಾಗಿದ್ದರು.
ಹಿರಿಯೂರು ತಾಲ್ಲೂಕಿನ ಬಸಪ್ಪ ಮಾಳಿಗೆ ಇವರ ಹುಟ್ಟೂರು.

ಇವರು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಆರ್.ಎಸ್.ಎಸ್.ನ ರಾಷ್ಟ್ರೀಯ ಸರಕಾರ್ಯವಾಹರಾಗಿದ್ದ ದತ್ತಾತ್ರೇಯ ರವರ ಜೊತೆಯಲ್ಲಿ ಒಡನಾಡಿಯಾಗಿದ್ದರು.

ಸಂತಾಪ : ಸಿದ್ಧೇಶ್ವ ಯಾದವ್ ರವರ ಆಗಲಿಕೆಗೆ ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ದಾವಣಗೆರೆ ಸಂಸದರಾದ ಜಿ,ಎಂ ಸಿದ್ದೇಶ್ವರ, ಶಾಸಕರಾದ ಎಂ.ಚಂದ್ರಪ್ಪ ವಿಧಾನ ಪರಿಷತ್ ಮುಖ್ಯ ಸಚೇತಕರಾದ ವೈ.ಎ.ನಾರಾಯಣಸ್ವಾಮಿ, ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ಎ.ಮುರುಳಿ, ಮುಖಂಡರಾದ ಲಿಂಗಮೂರ್ತಿ, ಜಯಪಾಲಯ್ಯ, ಅನಿತ್ ಕುಮಾರ್ ಸೇರಿದಂತೆ ಇತರರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಅಂತ್ಯಕ್ರಿಯೆ : ಜುಲೈ 4 ರಂದು ಸ್ವಗ್ರಾಮವಾದ ಹಿರಿಯೂರಿನ ಬಸಪ್ಪ ಮಾಳಿಗೆಯಲ್ಲಿ ಮಧಾಹ್ನ ಅಂತ್ಯಕ್ರಿಯೇ ನಡಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...