Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಸರ ಸಂರಕ್ಷಣೆ ಜಾಗೃತಿ ಎಲ್ಲರಲ್ಲೂ ಮೂಡಬೇಕು : ಸರ್ದಾರ್ ಸೇವಾಲಾಲ್ ಸ್ವಾಮೀಜಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.03) : ಸಮೃದ್ದ ಮಳೆ-ಬೆಳೆಯಾಗಿ ಪರಿಸರ ಹಚ್ಚ ಹಸಿರಿನಿಂದ ಕೂಡಿರಬೇಕಾದರೆ ಗಿಡ-ಮರಗಳನ್ನು ಬೆಳೆಸಬೇಕಿದೆ ಎಂದು ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಹೇಳಿದರು.

ಅರಣ್ಯ ಇಲಾಖೆ ಚಿತ್ರದುರ್ಗ ಪ್ರಾದೇಶಿಕ ಸಾಮಾಜಿಕ ವಲಯದಿಂದ ಜು.1 ರಿಂದ 7 ರವರೆಗೆ ಹಮ್ಮಿಕೊಂಡಿರುವ ವನ ಮಹೋತ್ಸವ ನಿಮಿತ್ತ ಸೀಬಾರದ ಸಮೀಪವಿರುವ ಬಂಜಾರ ಗುರುಪೀಠದ ಆವರಣದಲ್ಲಿ ಗುರು ಪೂರ್ಣಿಮ ದಿನದ ಸೋಮವಾರ ಸಸಿಗಳನ್ನು ನೆಟ್ಟು ಮಾತನಾಡಿದ ಸ್ವಾಮೀಜಿ ಮಾನವನ ದುರಾಸೆಯಿಂದ ಪರಿಸರ ನಾಶವಾಗುತ್ತಿದೆ. ಪರಿಸರ ಸಂರಕ್ಷಿಸುವುದು ಕೇವಲ ಅರಣ್ಯ ಇಲಾಖೆ ಕೆಲಸವಲ್ಲ. ಪ್ರತಿಯೊಬ್ಬರ ಜವಾಬ್ದಾರಿ ಎನ್ನುವ ಜಾಗೃತಿ ಎಲ್ಲರಲ್ಲೂ ಮೂಡಬೇಕಿದೆ ಎಂದು ತಿಳಿಸಿದರು.

ಶಿಕ್ಷಣ ಬೆಳೆದಂತೆಲ್ಲಾ ಪರಿಸರ ನಾಶವಾಗುತ್ತಿದೆ. ಹಿಂದಿನ ಕಾಲದಲ್ಲಿ ಹಿರಿಯರು ಗಿಡಗಳನ್ನು ನೆಟ್ಟು ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸುತ್ತಿದ್ದರು. ಕಾಲ-ಕಾಲಕ್ಕೆ ತಕ್ಕಂತೆ ಮಳೆಯಾಗಬೇಕಾದರೆ ಪರಿಸರ ಹಸಿರಿನಿಂದ ಕೂಡಿರಬೇಕು. ಆಗ ಮಾತ್ರ ಸಮೃದ್ದ ಬೆಳೆಯಾಗಿ ರೈತಾಪಿ ವರ್ಗ ಸೇರಿದಂತೆ ಸಕಲ ಜೀವರಾಶಿಗಳು ನೆಮ್ಮಿದಿಯಿಂದ ಬದುಕಲು ಸಾಧ್ಯ. ಇಷ್ಟೊತ್ತಿಗಾಗಲೆ ಸಾಕಷ್ಟು ಮಳೆಯಾಗಬೇಕಿತ್ತು. ಇನ್ನು ಬಾರದ ಕಾರಣ ದೇಶಕ್ಕೆ ಅನ್ನ ನೀಡುವ ರೈತ ಚಿಂತೆಗೊಳಗಾಗಿದ್ದಾನೆಂದು ವಿಷಾಧಿಸಿದರು.

ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ದುರ್ಗನಾಯ್ಕ ಮಾತನಾಡಿ ಪ್ರತಿ ವರ್ಷವು ಜೂ.5 ರಂದು ಪರಿಸರ ದಿನಾಚರಣೆಯನ್ನು ಆಚರಿಸಲಾಗುವುದು. ಅದರೆ ಅರಣ್ಯ ಇಲಾಖೆ ಏಳು ದಿನಗಳ ವನ ಮಹೋತ್ಸವ ಏರ್ಪಡಿಸಿರುವುದರಿಂದ ಇಲ್ಲಿ ಸಸಿಗಳನ್ನು ನೆಡಲಾಗುತ್ತಿದೆ. ಎಲ್ಲರೂ ಗಿಡ-ಮರಗಳನ್ನು ಬೆಳೆಸಿ ಪರಿಸರಕ್ಕೆ ಚಿಕ್ಕ ಕೊಡುಗೆಯನ್ನು ನೀಡಬೇಕೆಂದು ಮನವಿ ಮಾಡಿದರು.

ವಲಯ ಅರಣ್ಯಾಧಿಕಾರಿ ಉಷರಾಣಿ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳಿಗೆ ನುಗ್ಗೆ ಹಾಗೂ ಕರಿಬೇವು ಗಿಡಗಳನ್ನು ವಿತರಿಸಿ ಮಾತನಾಡುತ್ತ ಗಿಡಗಳನ್ನು ನೆಟ್ಟು ಪೋಷಿಸುವ ಹೊಣೆಗಾರಿಕೆ ನಿಮ್ಮದು. ಇನ್ನು ಎರಡು ಮೂರು ವರ್ಷಗಳಲ್ಲಿ ದೊಡ್ಡದಾಗಿ ಬೆಳೆದಿರಬೇಕು ಎಂದು ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಿದರು.

ಚಿತ್ರಡಾನ್‍ಬೋಸ್ಕೊ ನಿರ್ದೇಶಕ ಸ್ಟೀವನ್ ಲಾರೆನ್ಸ್, ಇಂದಿರಾಗಾಂಧಿ ವಸತಿ ಶಾಲೆಯ ಶಿಕ್ಷಕ ವಿಶ್ವಾಸ್, ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರದೀಪ್ ಕೇಸರಿ, ಚೇತನ್‍ನಾಯ್ಕ, ಬೀಟ್ ಫಾರೆಸ್ಟರ್‍ಗಳು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹೊನ್ನೂರ್ ಅಲಿ ಈ ಸಂದರ್ಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!