Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಅಧಿಕಾರ ಸ್ವೀಕಾರ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್,ಚಿತ್ರದುರ್ಗ, (ಜು.04) : ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಎಂ ಅವರು ಅಧಿಕಾರ ಸ್ವೀಕರಿಸಿದರು.

ಹೈಕೋರ್ಟ್ ವಿಭಾಗೀಯ ಪೀಠದ ನಿರ್ದೇಶನದ ಮೇರೆಗೆ ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿ ಅಧಿಕಾರ ಅಧಿಕಾರ ಸ್ವೀಕರಿಸಿದರು.

ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಠದ ಆಡಳಿತ ನಿರ್ವಹಣೆಯ ಉದ್ದೇಶದಿಂದ ಮಾಜಿ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿದ ಹೈಕೋರ್ಟ್, ಮಧ್ಯಂತರ ವ್ಯವಸ್ಥೆ ಮಾಡಿಕೊಳ್ಳಲು ಮಠದ ಭಕ್ತರಿಗೆ ಆರು ವಾರಗಳ ಕಾಲಾವಕಾಶ ನೀಡಿತ್ತು.

ಆಡಳಿತಾಧಿಕಾರಿ ನೇಮಕಾತಿ ರದ್ದುಪಡಿಸಿದ ಆದೇಶ ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠ, ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

ಊಟದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗ..!

ಹಿರಿಯೂರು : ಕ್ಷುಲ್ಲಕ ಕಾರಣಕ್ಕೆ ನಡುವೆ ಜಗಳವಾಗಿದ್ದು, ಈ ಜಗಳದಿಂದ ತಂದೆಯ ಕೊಲೆಯಾಗಿರುವ ಘಟನೆ ಕುಂದಲಗುರ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ. ಕೇವಲ ಊಟದ ವಿಚಾರಕ್ಕೆ ತಂದೆ ಮಗನ ನಡುವೆ

error: Content is protected !!