Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಎಲ್ಲಾ ಕರ್ಮಕಾಂಡಗಳಲ್ಲಿ ಬೊಮ್ಮಾಯಿಯವರ ಪಾಲುದಾರಿಕೆ ಇದೆ: ಸಿದ್ದರಾಮಯ್ಯ

Facebook
Twitter
Telegram
WhatsApp

ಹಾನಗಲ್: ಕೊವಿಡ್ ಸಂದರ್ಭದಲ್ಲಿ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಶ್ರೀನಿವಾಸ್ ಮಾನೆ ಮಾಡಿದ್ದಾರೆ. ಕಷ್ಟಕಾಲದಲ್ಲಿ ತಮ್ಮ ನೆರವಿಗೆ ಧಾವಿಸಿದ್ದರಿಂದ ಜನರೇ ಅವರನ್ನು ಆಪದ್ಬಾಂಧವ ಎಂದು ಕರೆಯುತ್ತಿದ್ದಾರೆ. ಈ ಬಾರಿ ಅವರನ್ನು ಗೆಲ್ಲಿಸಲೇ ಬೇಕು ಎಂದು ನಿರ್ಧಾರ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇನ್ನೂ ಮೆಕ್ಕೆಜೋಳಕ್ಕೆ 1850 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ, ಆದರೆ ಖರೀದಿ ಮಾಡ್ತಿಲ್ಲ. ಖರೀದಿ ಮಾಡದೆ ಬೆಂಬಲ ಬೆಲೆ ಘೋಷಿಸಿ ಏನು ಉಪಯೋಗ? ಬಿಜೆಪಿ ಸರ್ಕಾರದ ಎಲ್ಲಾ ಕರ್ಮಕಾಂಡಗಳಲ್ಲಿ ಬಸವರಾಜ ಬೊಮ್ಮಾಯಿಯವರ ಪಾಲುದಾರಿಕೆ ಇದೆ. ಯಡಿಯೂರಪ್ಪ ಸರ್ಕಾರದಲ್ಲಿ ನಡೆದ ಭ್ರಷ್ಟಾಚಾರ ಒಂದಾ ಎರಡಾ? ಬೊಮ್ಮಾಯಿ ಈಗ ಮುಖ್ಯಮಂತ್ರಿ ಆದ ಕೂಡಲೆ ಹಿಂದೆ ಮಾಡಿದ್ದ ಕರ್ಮಗಳೆಲ್ಲಾ ಹೋಗುತ್ತಾ? ಯಡಿಯೂರಪ್ಪನ್ನ ಜೈಲಿಗೆ ಹಾಕ್ತೀವಿ ಅಂತ ಹೆದರಿಸಿ ಮುಖ್ಯಮಂತ್ರಿ ಹುದ್ದೆ ಇಂದ ಕೆಳಗಿಳಿಸಿದ್ರು, ಪಾಪ ಕಣ್ಣೀರು ಹಾಕ್ತಾ ರಾಜೀನಾಮೆ ಕೊಟ್ಟರು. ಯಡಿಯೂರಪ್ಪ ಕೆಳಗಿಳಿಯೋದನ್ನೇ ಕಾಯ್ತಾ ಇದ್ರು ಬೊಮ್ಮಾಯಿ ಎಂದರು.

ನಿನ್ನೆ ಸಂಗೂರು ಸಕ್ಕರೆ ಕಾರ್ಖಾನೆ ಬಗ್ಗೆ ಮಾತಾಡಿದ್ದೆ. ಈ ಕಾರ್ಖಾನೆಯ ಆಡಳಿತ ಮಂಡಳಿಗೆ ಉದಾಸಿ ಅವರು ಅಧ್ಯಕ್ಷ ಮತ್ತು ಸಜ್ಜನರ್ ಉಪಾಧ್ಯಕ್ಷ ಆಗಿದ್ದರು. ಕಾರ್ಖಾನೆ ದಿವಾಳಿಯಾಗಿದ್ದು ನಮ್ಮಿಂದಲೋ? ಸಜ್ಜನರ್ ಮತ್ತು ಉದಾಸಿ ಇಂದಲೋ? ಇಂಥವರು ಸಜ್ಜನರಲ್ಲ ದುರ್ಜನರು. ಭ್ರಷ್ಟಾಚಾರದ ಆರೋಪ ಇರುವ ವ್ಯಕ್ತಿಯನ್ನು ಶಾಸಕರಾಗಿ ಆಯ್ಕೆ ಮಾಡ್ತೀರಾ? ಸಜ್ಜನರ್ ಮೇಲೆ ನನಗೆ ವೈಯಕ್ತಿಕ ದ್ವೇಷ ಇಲ್ಲ. ಆದರೆ ಸತ್ಯ ಜನರಿಗೆ ಗೊತ್ತಾಗಬೇಕಲ್ವಾ? ಇವತ್ತು ಸಕ್ಕರೆ ಕಾರ್ಖಾನೆಯನ್ನು ಸಿದ್ದೇಶ್ವರ ಅವರಿಗೆ ಕೊಟ್ಟಿರೋದು ಯಾರು?

ರಾಜ್ಯದಲ್ಲಿ ಬಿಜೆಪಿ ಬಂದು ಎರಡೂ ಕಾಲು ವರ್ಷ ಆಯ್ತು? ಈ ಸರ್ಕಾರ ಜನರಿಗಾಗಿ ಏನಾದ್ರೂ ಮಾಡಿದೆಯಾ? ನಾನು ಏಳು ಕೆ.ಜಿ ಅಕ್ಕಿ ಉಚಿತವಾಗಿ ಕೊಡ್ತಿದ್ದೆ. ಈಗಿನ ಬಿಜೆಪಿ ಸರ್ಕಾರ ಅದನ್ನು ಐದು ಕೆ.ಜಿ ಗೆ ಇಳಿಸಿದೆ. ಅದಕ್ಕೆ ನಾನು ಕೊರೊನಾ ಇದೆ, ಲಾಕ್ ಡೌನ್ ಇದೆ, ಜನರಿಗೆ ದುಡಿಮೆ ಇಲ್ಲ ಹತ್ತು ಕೆ.ಜಿ ಅಕ್ಕಿ ಕೊಡಿ, ಪ್ರತಿ ಬಿಪಿಎಲ್ ಕುಟುಂಬಕ್ಕೆ ಹತ್ತು ಸಾವಿರ ಧನಸಹಾಯ ಮಾಡಿ ಎಂದು ಸದನದಲ್ಲಿ ಹೇಳಿದೆ, ನನ್ನ ಮಾತನ್ನು ಕಿವಿಗೆ ಹಾಕೊಂಡಿಲ್ಲ. ಜನರ ತೆರಿಗೆ ಹಣವನ್ನು ಜನರಿಗೆ ಖರ್ಚು ಮಾಡಲು ಏನು ರೋಗ ಸರ್ಕಾರಕ್ಕೆ? ಮುಂದಿನ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, ಆಗ ಬಡವರಿಗೆ ಹತ್ತು ಕೆ.ಜಿ ಉಚಿತ ಅಕ್ಕಿ ಕೊಡುತ್ತೇವೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!