Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೋಟಗಾರಿಕೆ ಬೆಳೆಗಳಿಗೆ ಫಸಲ್ ಬಿಮಾ ಯೋಜನೆ ನೋಂದಣಿ ಆರಂಭ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ,(ಜುಲೈ.06) : 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದೆ.

ಜಿಲ್ಲೆಯ ರೈತರು ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಟೊಮ್ಯಾಟೋ ಹಾಗೂ ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆ ನೊಂದಣಿ ಮಾಡಬಹುದು.

ತೋಟಗಾರಿಕೆ ಬೆಳೆಗಳ ವಿವರ: 2023ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಗೆ ಅಧಿಸೂಚಿತ ತೋಟಗಾರಿಕೆ ಬೆಳೆಗಳ ವಿವರ ಇಂತಿದೆ.

ಚಿತ್ರದುರ್ಗ ತಾಲ್ಲೂಕು ಕಸಬಾ, ತುರುವನೂರು ಹಾಗೂ ಹಿರೇಗುಂಟನೂರು ಹೋಬಳಿ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ), ಭರಮಸಾಗರ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೊ).

ಚಳ್ಳಕೆರೆ ತಾಲ್ಲೂಕಿನ ಕಸಬಾ, ನಾಯಕನಹಟ್ಟಿ, ಪರುಶುರಾಂಪುರ ಹಾಗೂ ತಳಕು ಹೋಬಳಿಗೆ (ಈರುಳ್ಳಿ ನೀರಾವರಿ, ಟೊಮೋಟೊ)

ಹಿರಿಯೂರು ತಾಲ್ಲೂಕು ಕಸಬಾ ಹಾಗೂ ಧರ್ಮಪುರ ಹೋಬಳಿಗೆ (ಈರುಳ್ಳಿ ನೀರಾವರಿ), ಐಮಂಗಲ, ಜೆ.ಜಿ.ಹಳ್ಳಿ ಹೋಬಳಿಗೆ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ).

ಹೊಳಲ್ಕೆರೆ ತಾಲ್ಲೂಕು ಕಸಬಾ ಹೋಬಳಿ (ಈರುಳ್ಳಿ ನೀರಾವರಿ), ರಾಮಗಿರಿ ಹಾಗೂ ತಾಳ್ಯ ಹೋಬಳಿ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ, ಟೊಮೋಟೊ).

ಹೊಸದುರ್ಗ ತಾಲ್ಲೂಕು ಕಸಬಾ ಹೋಬಳಿ (ಈರುಳ್ಳಿ ಮಳೆಯಾಶ್ರಿತ, ಟೊಮೊಟೊ, ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ).

ಮೊಳಕಾಲ್ಮುರು ತಾಲ್ಲೂಕು ದೇವಸಮುದ್ರ ಹಾಗೂ ಕಸಬಾ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೊ, ಕೆಂಪು ಮೆಣಸಿನ ಕಾಯಿ ಮಳೆಯಾಶ್ರಿತ).

ವಿಮಾ ಕಂತಿನ ವಿವರ: ಟೊಮ್ಯಾಟೋ ಬೆಳೆಯ ವಿಮೆ ಮೊತ್ತ ಹೆಕ್ಟೇರ್‍ಗೆ ರೂ.141500 ಇದ್ದು, ರೈತರ ವಿಮಾ ಕಂತು ರೂ.7075 ಆಗಿದೆ. ನೀರಾವರಿ ಈರುಳ್ಳಿ ವಿಮೆ ಮೊತ್ತ ಹೆಕ್ಟೇರ್‍ಗೆ ರೂ.80500 ಇದ್ದು, ರೈತರ ವಿಮಾ ಕಂತು ರೂ.4025 ಆಗಿದೆ. ಮಳೆ ಆಶ್ರಿತ ಈರುಳ್ಳಿ ವಿಮಾ ಮೊತ್ತ ಹೆಕ್ಟೇರ್‍ಗೆ ರೂ. 75750  ಆಗಿದ್ದು, ರೈತರ ಮಿಮಾ ಕಂತು ರೂ.3787.50 ಆಗಿದೆ. ಮಳೆ ಆಶ್ರಿತ ಕೆಂಪು ಮೆಣಸಿಕಾಯಿ ಮಿಮಾ  ಮೊತ್ತ ಹೆಕ್ಟೇರ್‍ಗೆ ರೂ.78750 ಆಗಿದ್ದು, ರೈತರ ಮಿಮಾ ಕಂತು 3937.50 ಆಗಿದೆ. ಅಧಿಸೂಚಿತ ಬೆಳೆಗಳ ವಿಮೆಯನ್ನು ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ ಹಾಗೂ ಆರ್ಥಿಕ ಸಂಸ್ಥೆಗಳ ನೊಂದಣಿ ಮಾಡಬಹುದು.

ನೀರಾವರಿ ಆಶ್ರಿತ ಈರುಳ್ಳಿ ಬೆಳೆ ವಿಮೆ ನೊಂದಣಿಗೆ ಜುಲೈ 15 ಕಡೆಯ ದಿನ. ಉಳಿದಂತೆ ಮಳೆ ಆಶ್ರಿತ ಈರುಳ್ಳಿ, ಟೋಮ್ಯಾಟೊ ಹಾಗೂ ಕೆಂಪು ಮೆಣಸಿಕಾಯಿ ಬೆಳೆ ವಿಮೆಗೆ ಜುಲೈ 31 ಕಡೆಯ ದಿನವಾಗಿದೆ.  ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ವಿಮಾ ಕಂಪನಿಯಾಗಿ ಜಿಲ್ಲೆಗೆ ನಿಗಧಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆ ಕಚೇರಿ, ರೈತ ಸಂಪರ್ಕ ಕೇಂದ್ರ ಅಥವಾ ಹತ್ತಿರದ ಬ್ಯಾಂಕುಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!