Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಚಿಕೆ ಆಗ್ಬೇಕು.. ನಾಚಿಕೆ ಆಗ್ಬೇಕು.. ಸದನದಲ್ಲಿ ಕುಮಾರಸ್ವಾಮಿ ಮತ್ತು ಚೆಲುವರಾಯಸ್ವಾಮಿ ನಡುವೆ ಮಾತಿನ ಯುದ್ದ…!

Facebook
Twitter
Telegram
WhatsApp

 

ಬೆಂಗಳೂರು: ಇಂದು ವಿಧಾನಸಭೆಯಲ್ಲಿ ನಡೆದ ಸದನದಲ್ಲಿ ನಾಗಮಂಗಲದ ಕೆಎಸ್ಆರ್ಟಿಸಿ ಚಾಲಕನ ಆತ್ಮಹತ್ಯೆ ಪ್ರಕರಣ ಸದ್ದು ಮಾಡಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಈ ವಿಚಾರ ವಾಗ್ಯುದ್ದಕ್ಕೆ ಕಾರಣವಾಗಿತ್ತು. ಸದನದಲ್ಲಿಯೇ ಏಕವಚನದಲ್ಲಿಯೇ ಯುದ್ಧಕ್ಕೆ ನಿಂತು ಬಿಟ್ಟರು. ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರ ಮಧ್ಯೆ ಈ ರೀತಿಯಾಗಿದೆ.

ನಾನು ವರ್ಗಾವಣೆಯ ಬಗ್ಗೆ ಯಾರಿಗೂ ಕರೆ ಮಾಡಿಲ್ಲ, ಯಾವ ಪತ್ರನೂ ಕೊಟ್ಟಿಲ್ಲ. ಚಾಲಕನ ಕುಟುಂಬದವರೇ ವರ್ಗಾವಣೆ ರದ್ದು ಮಾಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆಯವರಿಗೆ ಕರೆ ಮಾಡಿ ವಿಚಾರಿಸಿದ್ದೆ. ಅನಿವಾರ್ಯ ಇದ್ದರೆ ವರ್ಗಾವಣೆ ಮಾಡಿ, ಇಲ್ಲಾಂದ್ರೆ ಬೇಡ ಎಂದಿದ್ದೆ. ಈ ಹಿನ್ನೆಲೆಯಲ್ಲಿ ಹೋಲ್ಡ್ ಮಾಡಿದ್ದಾರೆ. ವರ್ಗಾವಣೆ ಆದ ಮೂರು ದಿನಗಳ ಬಳಿಕ KSRTC ಡ್ರೈವರ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕುಮಾರಸ್ವಾಮಿ ಅವರ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದ ವಿಚಾರ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ.

ಚಲುವರಾಯಸ್ವಾಮಿ ಮಾತಿಗೆ ಉತ್ತರಿಸಿದ ಹೆಚ್‌ಡಿಕೆ ಇವರು ಎಲ್ಲಾ ಹಳೇ ಚರಿತ್ರೆ ತೆಗೆದಿದ್ದಾರೆ. ಸಿದ್ದರಾಮಯ್ಯನವರ ತೆಗೆಯುವ ಬಗ್ಗೆ ಎಲ್ಲಾ ಹೇಳಿದ್ದಾರೆ. ಚಲುವರಾಯಸ್ವಾಮಿಯನ್ನು ಮಂತ್ರಿ ಮಾಡೋಕೆ ನಾವೆಲ್ಲ ಏನೇನು ಮಾಡಬೇಕಿತ್ತು. ಎಲ್ಲವನ್ನೂ ಚರ್ಚೆ ಮಾಡೋಣ. ದೇವೇಗೌಡರು ಸರ್ಕಾರ ವಿಸರ್ಜನೆ ಮಾಡಿದಾಗ ಇವ್ರು ನನ್ನ ಕಾಲು ಕಟ್ಟಿಕೊಳ್ಳೋಕೆ ಬಂದಿದ್ರು. ಇವರ ನನ್ನ ಬಗ್ಗೆ ಮಾತನಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಇಬ್ಬರು ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಚೆಲುವರಾಯಸ್ವಾಮಿ ಅವರು, ಸಿಡಿ ಇದೆ ಅದಿದೆ ಅನ್ನೋದನ್ನ ಬಿಡಿ. ಅನಾವಶ್ಯಕವಾಗಿ ತೇಜೋವಧೆ ಮಾಡೋದನ್ನ ಬಿಡಿ. ನಿಮಗೆ ನಾಚಿಕೆಯಾಗಬೇಕು ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರು ನಿನ್ಗೆ ನಾಚ್ಕೆ ಆಗ್ಬೇಕು ಕೂತ್ಕೊ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!