ಬೆಂಗಳೂರು: ಇಂದು ವಿಧಾನಸಭೆಯಲ್ಲಿ ನಡೆದ ಸದನದಲ್ಲಿ ನಾಗಮಂಗಲದ ಕೆಎಸ್ಆರ್ಟಿಸಿ ಚಾಲಕನ ಆತ್ಮಹತ್ಯೆ ಪ್ರಕರಣ ಸದ್ದು ಮಾಡಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಈ ವಿಚಾರ ವಾಗ್ಯುದ್ದಕ್ಕೆ ಕಾರಣವಾಗಿತ್ತು. ಸದನದಲ್ಲಿಯೇ ಏಕವಚನದಲ್ಲಿಯೇ ಯುದ್ಧಕ್ಕೆ ನಿಂತು ಬಿಟ್ಟರು. ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಮಧ್ಯೆ ಈ ರೀತಿಯಾಗಿದೆ.
ನಾನು ವರ್ಗಾವಣೆಯ ಬಗ್ಗೆ ಯಾರಿಗೂ ಕರೆ ಮಾಡಿಲ್ಲ, ಯಾವ ಪತ್ರನೂ ಕೊಟ್ಟಿಲ್ಲ. ಚಾಲಕನ ಕುಟುಂಬದವರೇ ವರ್ಗಾವಣೆ ರದ್ದು ಮಾಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆಯವರಿಗೆ ಕರೆ ಮಾಡಿ ವಿಚಾರಿಸಿದ್ದೆ. ಅನಿವಾರ್ಯ ಇದ್ದರೆ ವರ್ಗಾವಣೆ ಮಾಡಿ, ಇಲ್ಲಾಂದ್ರೆ ಬೇಡ ಎಂದಿದ್ದೆ. ಈ ಹಿನ್ನೆಲೆಯಲ್ಲಿ ಹೋಲ್ಡ್ ಮಾಡಿದ್ದಾರೆ. ವರ್ಗಾವಣೆ ಆದ ಮೂರು ದಿನಗಳ ಬಳಿಕ KSRTC ಡ್ರೈವರ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕುಮಾರಸ್ವಾಮಿ ಅವರ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದ ವಿಚಾರ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ.

ಚಲುವರಾಯಸ್ವಾಮಿ ಮಾತಿಗೆ ಉತ್ತರಿಸಿದ ಹೆಚ್ಡಿಕೆ ಇವರು ಎಲ್ಲಾ ಹಳೇ ಚರಿತ್ರೆ ತೆಗೆದಿದ್ದಾರೆ. ಸಿದ್ದರಾಮಯ್ಯನವರ ತೆಗೆಯುವ ಬಗ್ಗೆ ಎಲ್ಲಾ ಹೇಳಿದ್ದಾರೆ. ಚಲುವರಾಯಸ್ವಾಮಿಯನ್ನು ಮಂತ್ರಿ ಮಾಡೋಕೆ ನಾವೆಲ್ಲ ಏನೇನು ಮಾಡಬೇಕಿತ್ತು. ಎಲ್ಲವನ್ನೂ ಚರ್ಚೆ ಮಾಡೋಣ. ದೇವೇಗೌಡರು ಸರ್ಕಾರ ವಿಸರ್ಜನೆ ಮಾಡಿದಾಗ ಇವ್ರು ನನ್ನ ಕಾಲು ಕಟ್ಟಿಕೊಳ್ಳೋಕೆ ಬಂದಿದ್ರು. ಇವರ ನನ್ನ ಬಗ್ಗೆ ಮಾತನಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.
ಇಬ್ಬರು ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಚೆಲುವರಾಯಸ್ವಾಮಿ ಅವರು, ಸಿಡಿ ಇದೆ ಅದಿದೆ ಅನ್ನೋದನ್ನ ಬಿಡಿ. ಅನಾವಶ್ಯಕವಾಗಿ ತೇಜೋವಧೆ ಮಾಡೋದನ್ನ ಬಿಡಿ. ನಿಮಗೆ ನಾಚಿಕೆಯಾಗಬೇಕು ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರು ನಿನ್ಗೆ ನಾಚ್ಕೆ ಆಗ್ಬೇಕು ಕೂತ್ಕೊ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











