Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಕಿಡಿ..

Facebook
Twitter
Telegram
WhatsApp

ಹಾನಗಲ್: ಈಗ ಪೆಟ್ರೋಲ್ ಬೆಲೆ 110, ಡೀಸೆಲ್ ಬೆಲೆ 100, ಗ್ಯಾಸ್ ಬೆಲೆ 950 ರೂಪಾಯಿ ಆಗಿದೆ. ಬಡವರು ಹೇಗೆ ಬದುಕಬೇಕು? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದು ಯುವಕರಿಗೆ ಮೋದಿ ಭರವಸೆ ನೀಡಿದ್ರು, ಪಾಪ ಯುವಕರು ನಂಬಿ ಓಟು ಹಾಕಿ ಗೆಲ್ಲಿಸಿದ್ರು, ಈಗ ಉದ್ಯೋಗ ಕೇಳಿದ್ರೆ ಪಕೋಡ ಮಾರಿ ಎಂದು ಬಿಟ್ಟಿ ಸಲಹೆ ಕೊಡ್ತಾರೆ ಎಂದು ಮಾಝಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಈ ವೇಳೆ ಮಾತನಾಡಿದ ಅವರು, ಹೋಗಲಿ ಈಗ ಪಕೋಡಾ ಆದ್ರೂ ಮಾರಲು ಸಾಧ್ಯವಿದೆಯಾ? ಅಡುಗೆ ಎಣ್ಣೆ ಬೆಲೆ 200 ರೂಪಾಯಿ ಆಗಿದೆ. ಮೋದಿ ಮೋದಿ ಎಂದವರಿಗೆ ತಿರುಪತಿ ನಾಮ ಹಾಕಿದ್ದಾರೆ. ಅದಕ್ಕೆ ಈಗ ಯಾರೂ ಸಾರ್ವಜನಿಕ ಸಭೆಗಳಲ್ಲಿ ಮೋದಿ ಮೋದಿ ಅಂತ ಕೂಗಾಡ್ತಿಲ್ಲ ಎಂದರು.

ಇನ್ನೂ ಕೊರೊನಾ ಓಡಿಸಲು ಲಸಿಕೆ ನೀಡುವ ಬದಲು ಜನರಿಗೆ ದೀಪ ಹಚ್ಚಿ, ಗಂಟೆ ಬಾರಿಸಿ ಎಂದು ದಾರಿ ತಪ್ಪಿಸಿದರು. ಮೋದಿ ತಮಗೆ 56 ಇಂಚಿನ ಎದೆ ಇದೆ ಎನ್ನುತ್ತಿದ್ದರು, ಎದೆ ಎಷ್ಟು ಇಂಚಿದೆ ಎಂಬುದು ಮುಖ್ಯವಲ್ಲ. ಆದ್ರೆ ಆ ಎದೆಯೊಳಗೆ ಬಡವರಿಗಾಗಿ, ಶೋಷಿತರಿಗಾಗಿ ಮಿಡಿಯುವ ತಾಯಿ ಹೃದಯ ಇದೆಯಾ? ಎಂಬುದು ಮುಖ್ಯ. ಮೋದಿಯನ್ನು, ಆರ್.ಎಸ್.ಎಸ್ ಅನ್ನು ಹೊಗಳಿ ಹೊಗಳಿ ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದಾರೆ. ಇವರು ರಿಮೋಟ್ ಮುಖ್ಯಮಂತ್ರಿ, ಇವರನ್ನು ಬಿಜೆಪಿ ಕಂಟ್ರೋಲ್ ಮಾಡುತ್ತಿದೆ.

ಒಂದು ಸಾವಿರ ಕೋಟಿ ಬೆಲೆಬಾಳುವ ಜಮೀನನ್ನು ಕೇವಲ 50 ಕೋಟಿಗೆ ಆರ್.ಎಸ್.ಎಸ್ ಮೂಲದ ಶಿಕ್ಷಣ ಸಂಸ್ಥೆಗೆ ನೀಡಿದ್ದಾರೆ. ಇದು ಬಹುದೊಡ್ಡ ಹಗರಣ. ಇದನ್ನು ಕೇಳಿದ್ರೆ ಸಂಘಪರಿವಾರದವರು ದೇಶಭಕ್ತರು ಎನ್ನುತ್ತಾರೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಒಬ್ಬನೇ ಒಬ್ಬ ಆರ್.ಎಸ್.ಎಸ್ ನಾಯಕನ ಹೆಸರು ಹೇಳಲಿ ನೋಡೋಣ. ಇಂಥವರು ಬೇರೆಯವರಿಗೆ ದೇಶಭಕ್ತಿ ಪಾಠ ಮಾಡ್ತಾರೆ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!