ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು 2023-24ರ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಟ್ ಅಂಡ್ ಪೇಸ್ಟ್ ಬಜೆಟ್ ಎಂದು ವ್ಯಂಗ್ಯವಾಡಿದ್ದಾರೆ.
ಕೇಂದ್ರ ಸರ್ಕಾರದ ಹಾಗೂ ಹಿಂದಿನ ಬಿಜೆಪಿ ಸರ್ಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಇದಾಗಿದೆ. ರಾಜಕೀಯ ಹೇಳಿಕೆಗಳಿಗೆ ಮೀಸಲಾದ ಬಜೆಟ್ ಆಗಿದೆ. ನಮ್ಮ ಹಣಕಾಸು ಸಚಿವರು ದಾಖಲೆ ನಿರ್ಮಿಸಿಕೊಳ್ಳಲು ಮಂಡಿಸಿರುವಂತ ಬಜೆಟ್ ಇದಾಗಿದೆ. ಇದನ್ನು ರಾಜ್ಯ ಬಜೆಟ್ ಪುಸ್ತಕ ಎನ್ನುವುದಕ್ಕಿಂತ ಬಿಜೆಪಿಯನ್ನು ನಿಂದಿಸುವುದಕ್ಕೆ ಸಿದ್ಧವಾದ ಬಜೆಟ್ ಎನ್ನಬಹುದು.
ಈ ಬಾರಿ 3 ಲಕ್ಷ 28 ಸಾವಿರ ಕೋಟಿ ಬಜೆಟ್ ನಲ್ಲಿ ಎರಡೂವರೆ ಲಕ್ಷ ಕೋಟಿ ರೆವಿನ್ಯೂ ಎಕ್ಸ್ ಪೆಂಡಿಚರ್, 27 ಸಾವಿರ ಕೋಟಿ ಸಾಲ ಮರುಪಾವತಿಗೆ ಇಟ್ಟುಕೊಂಡಿದ್ದಾರೆ. ಅದಾದ ಮೇಲೆ 85 ಸಾವಿರ ಕೋಟಿ ಸಾಲ ಎತ್ತುತ್ತಾರೆ. ಆ ಸಾಲಕ್ಕೆ ತಲೆ ಕೊಡುವುದು ಯಾರು?. ರಾಜ್ಯದಲ್ಲಿ ಹಣಕ್ಕೆ ಕೊರತೆ ಇಲ್ಲ. ರಾಜ್ಯದ ತೆರಿಗೆ ಇಲಾಖೆಗಳ ಯಾವುದೇ ಶ್ರಮ ಇಲ್ಲದೆ ಜನರು ರಾಜ್ಯದ ಜನತೆ ಖಜಾನೆ ತುಂಬಿದ್ದಾರೆ. ಅದಕ್ಕಾಗಿ ಜನತೆಯನ್ನು ಅಭಿನಂದಿಸುತ್ತೇನೆ. ಕೋವಿಡ್ ಸಮಸ್ಯೆಯಲ್ಲೂ, ಜನ ಹಣ ತುಂಬಿಸಿಕೊಟ್ಟಿದ್ದಾರೆ. ಒಂದೇ ವರ್ಷಕ್ಕೆ ಜನರ ಮೇಲೆ 85 ಸಾವಿರ ಕೋಟಿ ಸಾಲ ಹೊರೆ ಹೊರೆಸುತ್ತಿದ್ದಾರೆ. ಇಷ್ಟೋಂದು ಸಾಲ ಏಕೆ ಮಾಡ್ತೀದೀರಿ. ಅದಕ್ಕೆ ಕಾರಣ ಕೊಡಿ ಎಂದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್