ವೇಣುಗೋಪಾಲ್ ಹತ್ಯೆಯಲ್ಲಿ ಮುಸ್ಲಿಂ ವ್ಯಕ್ತಿ ಪಾತ್ರವಿಲ್ಲ : ಪೊಲೀಸ್ ಸ್ಪಷ್ಟನೆ

suddionenews
1 Min Read

ಮೈಸೂರು: ಹನುಮ ಜಯಂತಿ ಮೆರವಣಿಗೆ ವೇಳೆ ಟಿ ನರಸೀಪುರದಲ್ಲಿ ಗಲಾಟೆ ನಡೆದು ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ. ಬಾಟಲಿಯಿಂದ ಇರಿದು ಕೊಂದಿರುವ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ.

ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ಸೀಮಾ‌ ಲಾಟ್ಕರ್ ಮಾಹಿತಿ ನೀಡಿದ್ದಾರೆ. ವೇಣುಗೋಪಾಲ್ ಹತ್ಯೆಯಲ್ಲಿ ಮುಸ್ಲಿಂ ವ್ಯಕ್ತಿ ಪಾತ್ರವಿಲ್ಲ. ಘಟನಾ ಸ್ಥಳದಲ್ಲಿ ಹ್ಯಾರೀಸ್ ಸರ್ವೀಸ್ ಸೆಂಟರ್ ಇತ್ತು. ಘಟನೆ ನಡೆದಾಗ ಸಹಜವಾಗಿಯೇ ಹ್ಯಾರಿಸ್ ಸ್ಥಳದಲ್ಲಿದ್ದ. ಪ್ರಕರಣ ಸಂಬಂಧ ಇಬ್ಬರನ್ನು ವಶ‌ಪಡಿಸಿಕೊಳ್ಳಲಾಗಿದೆ. ಉಳಿದವರ ಸೆರೆಗೆ ವಿಶೆಷ ತಂಡ ರಚಿಸಲಾಗಿದೆ ಎಂದಿದ್ದಾರೆ.

ಬೈಕ್ ಪಾರ್ಕಿಂಗ್, ಪುನೀತ್ ಫೋಟೋ ವಿಚಾರಕ್ಕೆ ಜಗಳವಾಗಿದೆ ಎನ್ನಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳ ಬಂಧನವಾಗಿದೆ. ಸದ್ಯ ಇನ್ನಷ್ಟು ವಿಚಾರಣೆ ನಡೆಸಲಾಗುತ್ತಿದೆ. ಇದರ ನಡುವೆ ಸಂಬಂಧಿಕರ ದುಃಖ ಹೆಚ್ಚಾಗಿದೆ.

Share This Article
Leave a Comment

Leave a Reply

Your email address will not be published. Required fields are marked *