Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ ಹೇಗಿರಲಿದೆ.. ಇಲ್ಲಿದೆ ಡಿಟೈಲ್

---Advertisement---

ಬೆಂಗಳೂರು: ಮೋದಿ ಎಂಬ ಸರ್ ನೇಮ್ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಾಗಿತ್ತು. ಅದರನ್ವಯ ಎರಡು ವರ್ಷ ಜೈಲು ಶಿಕ್ಷೆ, ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಆ ಸಂಬಂಧ ಇದೀಗ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಪ್ರತಿಭಟಿಸಲು ಸಿದ್ದರಾಗಿದ್ದಾರೆ.

ಸ್ವಾತಂತ್ರ್ಯ ಉದ್ಯಾನವನದಲ್ಲಿ ಜುಲೈ 12 ರಂದು ಪ್ರತಿಭಟನೆ ನಡೆಯಲಿದೆ. ಬೆಳಗ್ಗೆ 10 ರಿಂದ ಸಂಜೆ 6ರ ತನಕವೂ ಮೌನ ಪ್ರತಿಭಟನೆ ನಡೆಸಲಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಮಾಡಿದ ಭಾಷಣ ಮುಂದಿಟ್ಟುಕೊಂಡು ರಾಜಕೀಯವಾಗಿ ಅವರನ್ನು ಮುಗಿಸುವ ಷಡ್ಯಂತ್ರ ನಡೆಯುತ್ತಿದ್ದು ಅದನ್ನು ಖಂಡಿಸುತ್ತೇವೆ. ದೇಶದ ಪರವಾಗಿ, ಸತ್ಯದ ಪರವಾಗಿ ಧ್ವನಿ ಎತ್ತುತ್ತಿರುವ ರಾಹುಲ್​ ಗಾಂಧಿ ಅವರ ಪರವಾಗಿ ಇಡೀ ದೇಶ ಹಾಗೂ ವಿರೋಧ ಪಕ್ಷಗಳು ನಿಲ್ಲುವ ಸಂದೇಶ ರವಾನಿಸಬೇಕಾಗಿದೆ. ಭಾರತ ಜೋಡೋ ಯಾತ್ರೆಯಲ್ಲಿ ಅವರಿಗೆ ಜನರಿಂದ ಸಿಕ್ಕ ಪ್ರೀತಿ ವಿಶ್ವಾಸ, ಕರ್ನಾಟಕ ರಾಜ್ಯದಲ್ಲಿ ಅವರಿಗೆ ಸಿಕ್ಕ ಭವ್ಯ ಯಶಸ್ಸು ಸಹಿಸಲಾಗದೇ ರಾತ್ರೋರಾತ್ರಿ ಅವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ ಎಂದು ಆರೋಪಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...