Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತನ್ನ ಉದ್ಯಮಕ್ಕೆ ಎದುರಾಳಿಯೆಂದು ಎಂಡಿ, ಸಿಇಒ ಇಬ್ಬರನ್ನೂ ಕೊಂದ ಹಳೆ ಉದ್ಯೋಗಿ..!

Facebook
Twitter
Telegram
WhatsApp

ಬೆಂಗಳೂರು: ಕೆಲವೊಮ್ಮೆ ಕೊಲೆಗಳ ಹಿಂದಿನ ಕಾರಣ ಕೇಳಿದ್ರೆ ಬೆಚ್ಚಿ ಬೀಳಸುತ್ತೆ. ಇಷ್ಟು ಸಿಲ್ಲಿ ಕಾರಣಕ್ಕೆ ಪ್ರಾಣವನ್ನೇ ತೆಗೆದುಬಿಟ್ಟರಲ್ಲ ಅಂತ. ಅಂತದ್ದೇ ಘಟನೆ ಈಗ ಬೆಂಗಳೂರಲ್ಲೂ ನಡೆದಿದೆ. ಹಾಡಹಗಲೇ ಕಂಪನಿಯೊಂದರ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಅಮೃತಹಳ್ಳಿಯಲ್ಲಿ ನಡೆದಿದೆ.

ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಪಣೀಂದ್ರ ಹಾಗೂ ಸಿಇಒ ವಿನು ಕುಮಾರ್ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಇದೇ ಸಂಸ್ಥೆಯ ಮಾಜಿ ಉದ್ಯೋಗಿ ಫೆಲಿಕ್ಸ್ ಕೊಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ತನ್ನ ಉದ್ಯಮಕ್ಕೆ ಹಳೇ ಕಂಪನಿ ಎದುರಾಳಿಯಾಗಿದ್ದರಿಂದ ಫೆಲಿಕ್ಸ್ ಈ ಕೊಲೆ ಮಾಡಿದ್ದಾನೆ.

ಫೆಲಿಕ್ಸ ಏರೋನಿಕ್ಸ್ ಕಂಪನಿಯಿಂದ ಹೊರ ಬಂದು ತನ್ನದೇ ಸ್ವಂತ ಕಂಪನಿ ಆರಂಭಿಸಿದ್ದ. ತನ್ನ ಉದ್ಯಮಕ್ಕೆ ಹಳೇ ಕಂಪನಿ ಎದುರಾಳಿ ಆಗಿದ್ದರಿಂದ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆಗೆ ಸಂಚು ಹೂಡಿದ್ದ ಫೆಲಿಕ್ಸ್, ಇಂದು ಸಂಜೆ 4 ಗಂಟೆಗೆ ಚಾಕು ಮತ್ತು ತಲ್ವಾರ್ ನಿಂದ ಫಣೀಂದ್ರ ಮತ್ತು ವಿನು ಕುಮಾರ್ ಮೇಲೆ ದಾಳಿ ಮಾಡಿ, ಕೊಲೆಗೈದಿದ್ದ. ಒಟ್ಟು ಮೂವರು ಜತೆಯಾಗಿ ಈ ಕೃತ್ಯವೆಸಗಿದ್ದು, ಒಂದು ಕೊಲೆ ತಳಮಹಡಿಯಲ್ಲಿ ಇನ್ನೊಂದು ಕೊಲೆ ಮೂರನೇ ಮಹಡಿಯಲ್ಲಿ ನಡೆದಿದೆ. ಪ್ರಕರಣದ ಬಳಿಕ ಆರೋಪಿಗಳು ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಸದ್ಯ ಅಮೃತಳ್ಳಿ ಪೊಲೀಸರು ಕೊಲೆ ಕೇಸನ್ನು ವಿಚಾರಣೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ : ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರಗೇಟು

ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ

error: Content is protected !!