Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

Electric Cycle : ಮಾರುಕಟ್ಟೆಯಲ್ಲಿ ಇದೀಗ ಎಲೆಕ್ಟ್ರಿಕ್ ಸೈಕಲ್ : ಗಂಟೆಗೆ 25 ಕಿ.ಮೀ. : ಕೇವಲ10 ರೂ. ಖರ್ಚಿನಲ್ಲಿ 100 ಕಿ.ಮೀ. ಪ್ರಯಾಣ

Facebook
Twitter
Telegram
WhatsApp

 

ಸುದ್ದಿಒನ್

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿದೆ. ಅದರಲ್ಲೂ ಕಾರು ಮತ್ತು ಬೈಕ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ. ಹೆಚ್ಚುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆ ಮತ್ತು ಅದರಿಂದಾಗುತ್ತಿರುವ ಮಾಲಿನ್ಯದಿಂದಾಗಿ ಗ್ರಾಹಕರು ಈಗ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಹಲವು ಕಂಪನಿಗಳು ಈಗ ಹೊಸ ಸೈಕಲ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ. ಟಾಟಾ ಸ್ಟ್ರೈಡರ್ ಇತ್ತೀಚೆಗೆ ಹೊಸ ಎಲೆಕ್ಟ್ರಿಕ್ ಬೈಸಿಕಲ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಅದೇ ಟಾಟಾ ಸ್ಟ್ರೈಡರ್ ಜೀಟಾ ಪ್ಲಸ್
(ಟಾಟಾ ಸ್ಟ್ರೈಡರ್ ಜೀಟಾ ಪ್ಲಸ್ ಇ).
(Tata Stryder Zeeta Plus E) ಇದು ಬಜೆಟ್ ಎಲೆಕ್ಟ್ರಿಕ್ ಬೈಸಿಕಲ್ ಆಗಿದೆ.

Tata Stryder Zeeta Plus ದರ

ಇದರ ಬೆಲೆ ರೂ.26,995 ರಿಂದ ಪ್ರಾರಂಭವಾಗುತ್ತದೆ. ಆದರೆ ಇದು ಕೇವಲ ಆರಂಭಿಕ ಬೆಲೆಯಾಗಿದೆ. ಈ ದರ ಕೆಲ ಕಾಲ ಮಾತ್ರ ಲಭ್ಯವಿರುತ್ತದೆ. ಲಾಂಚಿಂಗ್ ಆಫರ್ ಅಡಿಯಲ್ಲಿ ನೀವು ಈ ಬೆಲೆಯಲ್ಲಿ ಎಲೆಕ್ಟ್ರಿಕ್ ಬೈಸಿಕಲ್ ಅನ್ನು ಖರೀದಿಸಬಹುದು. ಆದರೆ ನಂತರ ಅದರ ದರ ರೂ. 6 ಸಾವಿರಕ್ಕೂ ಹೆಚ್ಚು ಆಗಲಿದೆ. ಅಂದರೆ ಈ ಎಲೆಕ್ಟ್ರಿಕ್ ಬೈಸಿಕಲ್ ಬೆಲೆ ರೂ.32,995 ಆಗಲಿದೆ. ಈ ಸೈಕಲ್ ಗಳನ್ನು ಅಧಿಕೃತ ವೆಬ್‌ಸೈಟ್‌ನಿಂದ ಖರೀದಿಸಬಹುದು. ಈ ಸೈಕಲ್ ಅನ್ನು ಟಾಟಾ ಕಂಪನಿಯ ಸಹಯೋಗದಲ್ಲಿ ವಿನ್ಯಾಸಗೊಳಿಸಲಾಗಿದೆ. ನೀವು ಈಗ ಈ ಸೈಕಲ್ ಖರೀದಿಸಿದರೆ, ನೀವು ಎರಡು ವರ್ಷಗಳ ವಾರಂಟಿಯನ್ನು ಸಹ ಪಡೆಯಬಹುದು.

Tata Stryder Zeeta Plus ವೈಶಿಷ್ಟ್ಯಗಳು

ಕಂಪನಿಯು ಈ ಸೈಕಲ್ ಗಳಿಗೆ 250W BLDC ಮೋಟಾರ್ ಅನ್ನು ಬಳಸಿದೆ. ಇದು ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಕೆಲಸ ಮಾಡುತ್ತದೆ. 36V-6Ah ಬ್ಯಾಟರಿ ಪ್ಯಾಕ್ ಅನ್ನು ಒದಗಿಸಲಾಗಿದೆ. ಇದು 216 WH ನ ವಿದ್ಯುತ್ ಉತ್ಪಾದನೆಯನ್ನು ನೀಡುತ್ತದೆ. ಈ ಬೈಸಿಕಲ್ ಅನ್ನು ಒಮ್ಮೆ ಚಾರ್ಜ್ ಮಾಡಿದರೆ 30 ಕಿಲೋಮೀಟರ್ ವರೆಗೆ ಪ್ರಯಾಣಿಸಬಹುದು. ಇದರ ಗರಿಷ್ಠ ವೇಗ ಗಂಟೆಗೆ 25 ಕಿಲೋಮೀಟರ್. ಕಂಪನಿಯು ಈ ಎಲೆಕ್ಟ್ರಿಕ್ ಬೈಸಿಕಲ್‌ನಲ್ಲಿ ಡ್ಯುಯಲ್ ಡಿಸ್ಕ್ ಬ್ರೇಕ್‌ಗಳನ್ನು ಒದಗಿಸಿದೆ.

ಟಾಟಾ ಸ್ಟ್ರೈಡರ್ ಜೀಟಾ ಪ್ಲಸ್ ಇ – ಇತರೆ ವೈಶಿಷ್ಟ್ಯಗಳು:

• ಆಟೋ-ಕಟ್ ಬ್ರೇಕ್ ಗಳು

• 250 W ಎಲೆಕ್ಟ್ರಿಕ್ ಮೋಟಾರ್

• ಹ್ಯಾಂಡಲ್ನಲ್ಲಿ ಡಿಸ್ಪ್ಲೇ

• ಸ್ಟೀಲ್ ಹಾರ್ಡ್‌ಟೈಲ್ ಫ್ರೇಮ್

• 36W/6AH ಬ್ಯಾಟರಿ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!