ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಒಂದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಬಿಸಿಯೂಟ ಮಾಡುವಾಗ ಮಹಿಳೆಯರು ಬಳೆ ತೊಟಗಟಿರಬಾರದು ಎಂಬುದು ಆ ಆದೇಶವಾಗಿದೆ. ಹೀಗಾಗಿ ಈ ಆದೇಶದ ವಿರುದ್ಧ ಮಹಿಳೆಯರು ಆಕ್ರೋಶಗೊಂಡಿದ್ದಾರೆ.
ಕರ್ನಾಟಕ ಸರ್ಕಾರ ಆದೇಶ ಒಂದನ್ನು ಹೊರಡಿಸಿದೆ. ಶಿಕ್ಷಣ ಇಲಾಖೆಯು ಪಿಎಂ ಪೋಷಣ್ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅನುಷ್ಠಾನಕ್ಕೆ ತರಲಾದ ಯೋಜನೆಯಡಿ ಬಿಸಿಯೂಟ ಯೋಜನೆ ನೀಡಲಾಗುತ್ತದೆ. ಎಸ್ಡಿಎಂಸಿ ಸಮಿತಿ ಶಾಲೆಗೆ ಭೇಟಿ ನೀಡಬೇಕು. ಜೊತೆಗೆ ಬಿಸಿಯೂಟದ ಶುಚಿ – ರುಚಿಯನ್ನು ನೋಡಬೇಕು ಎಂದು ತಿಳಿಸಲಾಗಿದೆ. ಎಸ್ಡಿಎಂಸಿ ಸದಸ್ಯರು ಏನೆಲ್ಲಾ ಮಾಡಬೇಕು ಎಂಬುದನ್ನು ಈ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ ಸುಮಾರು 55 ಸಾವಿರ ಅಡುಗೆ ಸಿಬ್ಬಂದಿಯಿದ್ದು, ಅವರಲ್ಲಿ ಬಹುತೇಕ ಮಂದಿ ಕುಂಕುಮ, ಬಳೆ ತೊಡುವವರೇ ಹೆಚ್ಚಿದ್ದಾರೆ. ಇಲಾಖೆಯ ಈ ಆದೇಶ ಧಾರ್ಮಿಕ ಸ್ವಾತಂತ್ರ್ಯ ಕಿತ್ತು ಕೊಳ್ಳುವಂತಿದೆ. ಮಕ್ಕಳ ಮೇಲೆ ಕಾಳಜಿ ಇದ್ದರೆ, ಈ ನಿಯಮವನ್ನು ಹಿಂದೆಯೇ ಮಾಡಬೇಕಿತ್ತು. ಅಷ್ಟಕ್ಕೂ ಕೋಟ್ಯಂತರ ತಾಯಂದಿರು ಮನೆಯಲ್ಲಿ ಕೈಗೆ ಬಳೆ ತೊಡದೇ ಅಡುಗೆ ಮಾಡ್ತಾರಾ? ಇದು ಉದ್ದೇಶ ಪೂರ್ವಕವಾಗಿ ಮಾಡುತ್ತಿರುವ ದ್ವೇಷದ ರಾಜಕಾರಣ ಎಂದು ಹಿಂದೂ ಜನಜಾಗೃತಿ ಕಿಡಿಕಾರಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















