Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವರು ಅವರಿಗೆ ಒಳ್ಳೆಯದು ಮಾಡಲಿ : ನ್ಯಾಯಾಲಯದಿಂದ ಬಂದ ಮೇಲೆ ಕಿಚ್ಚನ ರಿಯಾಕ್ಷನ್

Facebook
Twitter
Telegram
WhatsApp

ಬೆಂಗಳೂರು: ನಿರ್ಮಾಪಕರು ಹಾಗೂ ಕಿಚ್ಚ ಸುದೀಪ್ ನಡುವೆ ನಡೆಯುತ್ತಿರುವ ಕಾಲ್ ಶೀಟ್ ವಾರ್ ಎಲ್ಲರಿಗೂ ಗೊತ್ತಿರುವ ವಿಚಾರವೆ. ಇದೀಗ ಆ ವಾರ್ ಕೋರ್ಟ್ ಮೆಟ್ಟಿಲೇರಿದೆ. ಕಿಚ್ಚ ಸುದೀಪ್ ಇಂದು ನ್ಯಾಯಲಯಕ್ಕೆ ಈ ಸಂಬಂಧ ಹಾಜರಾಗಿದ್ದರು.

ಇದೇ ವೇಳೆ‌ ಮಾತನಾಡಿದ ಸುದೀಪ್, ಯಾರು ಏನೇ ಆರೋಪ ಮಾಡಿದ್ರು ಕೋರ್ಟ್ ನಿಂದ ಸರಿ ಉತ್ತರ ಸಿಗುತ್ತೆ. ಒಂದು ವಿಚಾರ ಹೇಳೋಕೆ ಇಷ್ಟಪಡ್ತೀನಿ. ದೇವ್ರು ಒಳ್ಳೆದ್ ಮಾಡ್ಲಿ.. ಒಂದಂತು ಸತ್ಯ. ಯಾವುದೇ ಸುಳ್ಳಿರಲಿ, ಸತ್ಯ ಇರಲಿ ಬಹಿರಂಗವಾಗಿ ಹೊರಗೆ ಬರಲೇ ಬೇಕು. ಸರಿಯಾದ ಮಾರ್ಗದಲ್ಲಿ ಹೋಗ್ತಿದ್ದೀನಿ ಅಂತಾ ನಾನು ಅಂದ್ಕೊಂಡಿದೀನಿ. ಕೋರ್ಟ್ ಗೆ ಹೋದ್ರೆ ಎಲ್ಲಾ ಸರಿ ಹೋಗುತ್ತೆ. ನಾನು ಕಲಾವಿದ ಆದ್ಮೇಲೆ ಎಲ್ಲರಿಗೂ ಸಹಾಯ ಮಾಡ್ತೀನಿ ಅಂತಾ ಚಾರಿಟಬಲ್ ಟ್ರಸ್ಟ್ ಓಪನ್ ಮಾಡಿಲ್ಲ. ಮಾಧ್ಯಮವನ್ನ ಸರಿಯಾಗಿ ಬಳಸಿಕೊಳ್ಳಬೇಕು. ಬಾಯಿ ಇದೆ ಅಂತಾ ಹೆಂಗ್ ಬೇಕು ಹಂಗೆ ಮಾತಾಡ್ಬಾರ್ದು. ನಾನು ಸರಿಯಾಗೆ ನಡ್ಕೊಂಡ್ ಬಂದಿದೀನಿ. ಎಲ್ಲರ ಆರೋಪಕ್ಕೆ ನಾನು ಉತ್ತರ
ಕೊಡಲ್ಲ.

ಎಲ್ಲಿ ಇತ್ಯರ್ಥ ಆಗ್ಬೇಕು ಅಲ್ಲಿ ಇತ್ಯರ್ಥ ಆಗುತ್ತೆ. ಅದ್ಕೆ ನಾನು ಕೋರ್ಟ್ ನಲ್ಲಿ ಬಂದೆ. ಜಾಕ್ ಮಂಜು ಏನ್ ಉತ್ತರ ಕೊಡಬೇಕಿತ್ತು ಕೊಟ್ಟಿದಾರೆ. ನಾನೇ ಬಂದು ಪತ್ರಿಕಾಗೋಷ್ಠಿ ಮಾಡಿದ್ರೆ ಅವ್ರಿಗೂ ನಂಗೂ ಏನ್ ವ್ಯತ್ಯಾಸ ಇರುತ್ತೆ. ನಾನು ಬೆಂಡಾಗಿ ಕೂಡ ಇನ್ನೊಬ್ರಿಗೆ ಕೆಟ್ಟ ಉದಾಹರಣೆ ಆಗ್ಬಾರ್ದು.‌ ನಾನು ಸಂಪಾದನೆ ಮಾಡಿರೋ ಹೆಸರಾಗಲಿ, ಸ್ಟಾರ್ ಗಿರಿ ಆಗಲಿ ಯಾರಿಂದಲೂ ಅಳಿಸೋಕೆ ಆಗಲ್ಲ. ಹಂಗೇನಾದ್ರು ಆಗುತ್ತೆ ಅಂದ್ರೆ ನಾನು ಏನೂ ಮಾಡಿಲ್ಲ ಅಂತಾ ಅರ್ಥ..

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!