Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಹೂವು ಬೆಳಗಾರರ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,(ಜು.17) :  ತೋಟದಲ್ಲಿ ಬೆಳೆಯುತ್ತಿರುವ ಹೂವಿನ ಬೆಳೆಗೆ ರೋಗ ಆವರಿಸಿದ್ದು ಇದನ್ನು ತಡೆಯಲು ಮಾಡಿದ ಹಲವಾರು ಕ್ರಮಗಳು ಸಹಾ ಸಹಕಾರ ಮಾಡಿಲ್ಲ ಇದನ್ನು ಪ್ರತಿಭಟಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಹೂವನ್ನು ಹಾಕಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬೆಳೆಗಾರರು ಪ್ರತಿಭಟನೆಯನ್ನು ನಡೆಸಿದರು.

ತಾಲ್ಲೂಕಿನಲ್ಲಿ ಸಾವಿರಾರು ಕುಟುಂಬಗಳು ಹೂವನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಸುಮಾರು 4 ವರ್ಷದಿಂದ ಹೂವಿಗೆ ನುಸಿ ರೋಗದ ಬಾದೆಯು ಹೆಚ್ಚಾಗಿದ್ದು, ಯಾವುದೇ ಔಷಧಿ ಸಿಂಪಡಿಸಿದರೂ ನುಸಿ ರೋಗ ಹತೋಟಿಗೆ ಬರುತ್ತಿಲ್ಲ. ಅನೇಕ ಅಂಗಡಿಗಳಲ್ಲಿ ಬಯೋ ಕಂಪನಿ ಔಷಧಿಯನ್ನು ಮಾರಾಟ ಮಾಡುತ್ತಿದ್ದಾರೆ. ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಇಲಾಖೆ ರವರಿಗೆ ಸಾಕಷ್ಟು ಬಾರಿ ಗಮನಕ್ಕೆ ಬಂದಿದ್ದರೂ ಸಹ ಒಬ್ಬರ ಮೇಲೆ ಒಬ್ಬರು ಹೇಳಿಕೊಂಡು ಈ ಕಳಪೆ ಔಷಧಿ ಅಂಗಡಿಗಳಲ್ಲಿ ಎಗ್ಗಿಲ್ಲದೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಹೂವಿನ ಕೃಷಿಯನ್ನು ಒಂದು ವಾಣಿಜ್ಯ ಬೆಳೆಯಾಗಿ ಬೆಳೆಯುತ್ತಿದ್ದು, ಅಲ್ಪಸ್ವಲ್ಪ ಅಚ್ಚುಕಟ್ಟು ಜಮೀನಿನಲ್ಲಿ ಹೂವಿನ ಕೃಷಿಯನ್ನು ಮಾಡುತ್ತಿದ್ದು, ದಿನನಿತ್ಯ ಮನೆ ಖರ್ಚಿಗೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೂಗಳನ್ನು ಬೆಳೆಯುತ್ತಿದ್ದು ಈ ಐದಾರು ವರ್ಷಗಳಿಂದ ನುಸಿಹುಳು ಹೆಚ್ಚಾಗಿದ್ದು, ಹೂಗಳನ್ನು ತಿಂದು ಹಾಕುತ್ತಿದ್ದು ತೋಟಗಾರಿಕೆ ಇಲಾಖೆಯವರಿಗೂ ಹಾಗೂ ಕೃಷಿಇಲಾಖೆಯವರಿಗೂ ಮನವಿ ಮಾಡಿದ್ದರೂ ಸಹ ರೈತರ ತೋಟಕ್ಕೆ ಬಂದು ಯಾವುದೇ ರೀತಿ ರೈತರಿಗೆ ಸಲಹೆ ನೀಡಿರುವುದಿಲ್ಲ. ಚಿತ್ರದುರ್ಗ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆ ಕೃಷಿ ಇಲಾಖೆ ಇದೆಯೋ ಇಲ್ಲವೆಂಬುದು ರೈತರಿಗೆ ಗೊತ್ತಾಗಬೇಕು. ನುಸಿಹುಳು ರೈತರ ಬದುಕನ್ನು ನುಂಗಿಹಾಕುತ್ತಿದೆ. ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್ ಬಾಬು, ತಾಲ್ಲೂಕು ಅಧ್ಯಕ್ಷ ಧನಂಜಯ, ಮುಖಂಡರಾದ ಭೂತಯ್ಯ, ಮಂಜಪ್ಪ ಶಿವನಕೆರೆ, ಸಿ.ನಾಗರಾಜು ಮುದ್ದಾಪುರ, ಎಸ್.ಟಿ.ಚಂದ್ರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಕ್ಲಹಳ್ಳಿ ರವಿಕುಮಾರ್, ಬೇಡರೆಡ್ಡಿ ಹಳ್ಳಿ ಬಸವರೆಡ್ಡಿ ಎಂ.ಬಿ.ತಿಪ್ಪೇಸ್ವಾಮಿ ಕಾಂತರಾಜು, ಮೂರ್ತಿ, ಮಹಂತಣ್ಣ, ಶಾಂತಣ್ಣ, ಮಲ್ಲಿಕಾರ್ಜನ ನಾಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್

error: Content is protected !!