Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಮತ್ತು ವಿಜಯನಗರದಲ್ಲಿ ದಾಖಲೆ ಮಳೆ

---Advertisement---

 

 

ಬೆಂಗಳೂರು: ಮುಂಗಾರು ಮಳೆ ಎಲ್ಲೆಲ್ಲೂ ತನ್ನ ಅಬ್ಬರವನ್ನು ಮುಂದುವರೆಸಿದೆ. ಆದ್ರೆ ಮಳೆ ಶುರುವಾದ ಅಂಕಿ ಅಂಶಗಳ ಪ್ರಕಾರ ಕರ್ನಾಟಕ ಈ ಬಾರಿ ಶೇ. 23ರಷ್ಟು ಮಳೆ ಕೊರತೆಯನ್ನು ಎದುರಿಸಲಿದೆ ಎನ್ನಲಾಗಿದೆ. ಆದರೆ ರಾಜ್ಯದ ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಮೂಲಗಳ ಪ್ರಕಾರ ರಾಜ್ಯ ಸರ್ಕಾರದಿಂದಾನೂ ಮೋಡ ಬಿತ್ತನೆಗೆ ಪ್ಲ್ಯಾನ್ ನಡೆಯುತ್ತಿದೆ ಎನ್ನಲಾಗಿದೆ. ಕೆಲವು ಕಡೆಗಳಲ್ಲಿ ಮಳೆ ಕೈಕೊಟ್ಟ ಹಿನ್ನೆಲೆ ಮೋಡ ಬಿತ್ತನೆ ಮಾಡುವ ಸಾಧ್ಯತೆ ಇದೆ. ರಾಣೇಬೆನ್ನೂರು ಹಾಗೂ ಹಾಸನ ಭಾಗದಲ್ಲಿ ಮೋಡ ಬಿತ್ತನೆ ಮಾಡಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ಬೀದರ್, ಬೆಳಗಾವಿ, ಕೊಪ್ಪಳ, ಕಲಬುರಗಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸದ್ಯ ರೈತರು ಸಹ ಉತ್ತಮ ಮಳೆಗಾಗಿ ಕಾಯುತ್ತಿದ್ದಾರೆ. ಇದು ಕೃಷಿ ಮಾಡುವಂತ ಸಮಯವಾಗಿದೆ. ಹೀಗಾಗಿ ಮಳೆ ಉತ್ತಮವಾಗಿ ಬಂದರೆ ಬೆಳೆಯೂ ಉತ್ತಮವಾಗಿ ಇರಲಿದೆ. ಈಗಾಗಲೇ ಮಳೆ ಇಲ್ಲದೆ ತರಕಾರಿ ದರಗಳು ಮುಗಿಲು ಮುಟ್ಟಿದೆ. ಜನಸಾಮನ್ಯರು ಕೂಡ ದರದ ಬಿಸಿಯಿಂದ ಸಮಾಧಾನಗೊಳ್ಳಬೇಕು ಅಂದ್ರೆ ಮೊದಲು ಉತ್ತಮ ಮಳೆಯಾಗಬೇಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment