Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಷಲ್ ಇಲ್ಲದೆ ಇದ್ದರೆ ಡೆಪ್ಯೂಟಿ ಸ್ಪೀಕರ್ ಮೇಲೆ ಹಲ್ಲೆಯಾಗುತ್ತಿತ್ತು : ಸಿಎಂ ಸಿದ್ದರಾಮಯ್ಯ

---Advertisement---

 

 

ಬೆಂಗಳೂರು: ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವರ್ತನೆಗೆ ಕಿಡಿಕಾರಿದ್ದಾರೆ.

ಬಿಜೆಪಿಗೆ ಸಂಸದೀಯ ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥೆ ಮೇಲೆ ನಂಬಿಕೆ. ಬಿಜೆಪಿಯವರು ಪ್ರಜಾಪ್ರಭುತ್ವದ ವಿರೋಧಿಗಳು. ಸದನದಲ್ಲಿ ನಿನ್ನೆ ಬಿಜೆಪಿಯವರ ನಡವಳಿಕೆ ಬಗ್ಗೆ ಏನಂತ ಕರೆಯಬೇಕು. ಬಿಜೆಪಿಯವರನ್ನು ಅನಾಗರೀಕರು ಅಂತ ಕರೆಯಬೇಕು. ನಾನು ಯಾವತ್ತಿಗೂ ಇಂತಹ ಅನಾಗರಿಕ ವರ್ತನೆಯನ್ನು ನೋಡಿಲ್ಲ. ಪಾಪ ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಮುಖವೇ ಸಪ್ಪೆ ಆಗಿ ಹೋಗಿದೆ. ಯೋಚನೆ ಮಾಡಬೇಡಿ, ನಾವು ನಿಮ್ಮ ಜೊತೆ ಇದ್ದೇವೆ ಎಂದು ಹೇಳಿದ್ದೇವೆ.

ಮಾರ್ಷಲ್ ಇಲ್ಲದಿದ್ದರೆ ಡೆಪ್ಯೂಟಿ ಸ್ಪೀಕರ್ ಮೇಲೆ ಹಲ್ಲೆ ಮಾಡುತ್ತಿದ್ದರೇನೋ..? ಲೋಕಸಭೆ ಚುನಾವಣೆಯಲ್ಲಿ ನಾವು ಕನಿಷ್ಠ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ. ನಾವು ಕೊಟ್ಟ ಗ್ಯಾರಂಟಿಗಳಿಂದ ಜನರು ಸಂತೋಷವಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಸಭೆಯಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಇಂಡಿಯಾ ಹೆಸರಲ್ಲಿ ಒಂದಾಗಿದ್ದನ್ನು ಕಂಡು ಸಹಿಸದೆ ಕ್ಯಾತೆ ತೆಗೆದಿದ್ದಾರೆ.

ಯಾವ ಪ್ರಧಾನಿ ಇಷ್ಟು ಬಾರಿ ಚುನಾವಣೆ ಪ್ರಚಾರ ಮಾಡಿಲ್ಲ. ಅದು ಒಂದು ಅಸೆಂಬ್ಲಿ ಚುನಾವಣೆಗೆ ಇಷ್ಟೊಂದು ಪ್ರಚಾರ ಮಾಡಿಲ್ಲ. ಮೈಸೂರು, ಬಾದಾಮಿ, ಬೆಂಗಳೂರು ಸೇರಿ ಹಲವೆಡೆ ಮೋದಿ ಪ್ರಚಾರ ಮಾಡಿದ್ದಾರೆ. ಅವರು ಪ್ರಚಾರ ಮಾಡಿದ ಕಡೆಯಲ್ಲೆಲ್ಲಾ ನಾವೇ ಗೆದ್ದಿದ್ದೇವೆ. ಕೇಶವ ಕೃಪದವರು ನೋಡಲಿ ಅಂತ ಬಿಜೆಪಿಯವರ ನಾಟಕ. ಇವರು ಯಾವುದೇ ಚುನಾವಣೆಗಳಲ್ಲೂ ಹೆಚ್ಚು ಮತ ಪಡೆದಿಲ್ಲ. ನಮ್ಮ ಮತಗಳ ಶೇಕಡವಾರು ಜಾಸ್ತಿಯಾಗುತ್ತದೆ. ರಾಜ್ಯದಲ್ಲಿ ಬಿಜೆಪಿ ಯಾವತ್ತೂ ಅಧಿಕಾರಕ್ಕೆ ಬರಬಾರದು. ಬಿಜೆಪಿ ಯಾವಾಗಲೂ ವಿಪಕ್ಷವಾಗಿ ಇರಬೇಕು. ನಾನು ಬಿಜೆಪಿ ಮುಕ್ತ ಭಾರತ ಆಗಲಿ ಅಂತ ಹೇಳುವುದಿಲ್ಲ. ಬಿಜೆಪಿ ಅವನತಿ ಕರ್ನಾಟಕದಿಂದ ಶುರುವಾಗಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment