Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ನಲ್ಲಿ ಸಿದ್ದರಾಮಯ್ಯ ಇರಬೇಕಾದ್ರೆ ಕುಮಾರಸ್ವಾಮಿ ವಿಷ ಕಾರುತ್ತಿದ್ರು: ಜಮೀರ್ ಅಹ್ಮದ್

Facebook
Twitter
Telegram
WhatsApp

ಬೆಂಗಳೂರು: ಜೆಡಿಎಸ್ ನಲ್ಲಿ ಸಿದ್ದರಾಮಯ್ಯ ಇರಬೇಕಾದ್ರೆ ಕುಮಾರಸ್ವಾಮಿ ವಿಷ ಕಾರುತ್ತಿದ್ರು ಎಂದು ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ಖಾನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನ್ನನ್ನ ಸಿದ್ದರಾಮಯ್ಯ ಮುಗಿಸಬೇಕು ಅಂದುಕೊಂಡ್ರೆ ಅಹಾರ ಖಾತೆ ಕೊಡಿಸುತ್ತಿರಲಿಲ್ಲ, ಸಿದ್ದರಾಮಯ್ಯ ರಾಜಕೀಯವಾಗಿ ಬೆಳೆಸುತ್ತಾರೆ ಹೊರತು ರಾಜಕೀಯವಾಗಿ ಯಾರನ್ನೂ ಮುಗಿಸಲ್ಲ ಎಂದು ಕುಮಾರಸ್ವಾಮಿ ವಿರುದ್ದವಾಗಿ ಕಿಡಿಕಾರಿದರು,

ಇನ್ನೂ ನನಗೆ ಸಮ್ಮಿಶ್ರ ಸರ್ಕಾರದಲ್ಲಿ ಇವರು ಹಜ್ ಖಾತೆ ಕೊಟ್ಟಿದ್ರು, ಕುಮಾರಸ್ವಾಮಿ ನನ್ನ ಯೋಗ್ಯತೆ ಅದೇನಾನಾನು ಕಾಂಗ್ರೆಸ್ ಬಂದ ತಕ್ಷಣ ನನಗೆ ಅಹಾರ ಖಾತೆ ಕೊಟ್ರು. ಜಾಫರ್ ಷರೀಫ್ ಮೊಮ್ಮಗನನ್ನ ಮುಗಿಸಿದ್ದು ಕುಮಾರಸ್ವಾಮಿನಾನು ಮುಸ್ಲಿಂರಿಗೆ ಅನ್ಯಾಯ ಮಾಡಬೇಡಿ ಎಂದು ಮನವಿ ಮಾಡಿದೆ, ದೇವೇಗೌಡರ ಬಳಿಯೂ ಕೇಳಿಕೊಂಡೆ ಅದಕ್ಕೆ ನಾನು ಪ್ರಚಾರಕ್ಕೆ ಹೋಗಲಿಲ್ಲ. ಮಾಜಿ ಪ್ರಧಾನಿಗಳಾದ ದೇವೇಗೌಡರು ನನ್ನನ್ನು ಮೀರ್ ಸಾದಿಕ್ ಎಂದು ಕರೆದ್ರು. ನಾನು ಅಭ್ಯರ್ಥಿ ಹಾಕಬೇಡಿ ಎಂದು ಹೇಳಿದ್ರು ಹಾಕಿದ್ರು ಇದು ನಿಮ್ಮ ಮುಸ್ಲಿಂ ಮೇಲಿನ ಕಾಳಜಿಯೇ ಕುಮಾರಸ್ವಾಮಿ ಎಂದು ಪ್ರಶ್ನಿಸಿದರು.

ಸಮ್ಮಿಶ್ರ ಸರ್ಕಾರ ಇದ್ದಾಗ ಬಿಎಸ್ ವೈ ಗೆ ಅಧಿಕಾರ ಕೊಡಲಿಲ್ಲ, ಎಚ್.ಡಿ ರೇವಣ್ಣ ಡಿಸಿಎಂ ಆಗ್ತಾರೆ ಅಂತ ಬಿಎಸ್ ವೈ ಗೆ ಅಧಿಕಾರ ಹಸ್ತಾಂತರ ಮಾಡಲಿಲ್ಲ ಸ್ವತಃ ಅವರ ಅಣ್ಣ ಬೆಳೆಯೋದನ್ನೇ ಕುಮಾರಸ್ವಾಮಿ ಸಹಿಸಲಿಲ್ಲ ಅಲ್ಪಸಂಖ್ಯಾತರು ಬೆಳೆಯೋದನ್ನ ಹೆಚ್ ಡಿಕೆ ಸಹಿಸ್ತಾರಾ..? ಎಂದು ಕಿಡಿಕಾರಿದರು, ಇನ್ನೂ ಫಾರೂಕ್ ಅವರನ್ನ ಮಂತ್ರಿ ಮಾಡಲಿಲ್ಲ, ಫಾರುಕ್ ಅವರನ್ನ ಡಿಸಿಎಂ ಮಾಡಿ , ಹೋಮ್ ಮಿನಿಸ್ಟರ್ ಮಾಡ್ತೇನೆ ಎಂದಿದ್ರು ಫಾರೂಕ್ ಅವರನ್ನ ಮಂತ್ರಿ ಮಾಡಿದ್ರಾ ಕುಮಾರಸ್ವಾಮಿ ಅವರೇ ಎಂದರು.

ದೇವೇಗೌಡರು ಜಾತ್ಯಾತೀತ ನಾಯಕ, ಕುಮಾರಸ್ವಾಮಿ, ದೇವೇಗೌಡರಲ್ಲಿ ಒಂದು ಪರ್ಸೆಂಟ್ ಸಹ ಇಲ್ಲ.ರಾಮನಗರ ಮುಸ್ಲಿಂ ಅಭ್ಯರ್ಥಿ ಗೆ ಬಿಟ್ಟು ಕೊಡಬೇಕಿತ್ತು. ಕುಮಾರಸ್ವಾಮಿ ಎರಡೂ ಕಡೆ ನಿಲ್ಲುವ ಅಗತ್ಯ ಏನಿತ್ತು, ರಾಮನಗರದಲ್ಲಿ ಮುಸ್ಲಿಂ ಅಭ್ಯರ್ಥಿ ಈ ಹಿಂದೆ ಗೆದ್ದಿದ್ರು.ಅನಿತಕ್ಕನಿಗೆ ಕೊಡದೇ ಮುಸ್ಲಿಂ ಅವರಿಗೆ ಕೊಡಬೇಕಿತ್ತು,ಮುಸ್ಲಿಂ ಪರ ಕಾಳಜಿ ತೋರಿಸಬೇಕಿತ್ತು ಎಂದು ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!