Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಎ ಮತ್ತು ಬಿ ವೃಂದದ ಬಡ್ತಿಗಾಗಿ ಮತ್ತೇ ಕೋರ್ಟ್‌ನಲ್ಲಿ ದಾವೆ ಸಲ್ಲಿಕೆ

---Advertisement---

 

ಬೆಂಗಳೂರು : ವಿಕಲಚೇತನ ನೌಕರರಿಗೆ ಅವರ ಸೇವಾ ಜೇಷ್ಠತೆಯನ್ನು ಅನುಸರಿಸಿ ನೀಡಬೇಕಾದ ಶೇಕಡಾ4 ರಷ್ಟು ಬಡ್ತಿ ವಿಷಯದಲ್ಲಿ ಕೇವಲ ಸಿ ಮತ್ತು ಡಿ ವೃಂಧಗಳಿಗೆ ಮಾತ್ರ ನೀಡಿ ಉಳಿದ ಎ ಮತ್ತು ಬಿ ವೃಂಧಗಳಿಗೆ ನೀಡದೇ ತಾರತಮ್ಯ ಮಾಡಿತ್ತು.ಇದನ್ನು ಪ್ರಶ್ನಿಸಿ ಎ ಮತ್ತು ಬಿ ವೃಂದದ ಹುದ್ದೆಗಳಿಗೂ ಕೂಡಾ ಶೇಕಡಾ 4 ರಷ್ಟು ಬಡ್ತಿಯಲ್ಲಿ ಮೀಸಲಾತಿ ನೀಡುವಂತೆ ವಿಕಲಚೇತನ ನೌಕರರ ಸಂಘವು ಕೋರ್ಟನಲ್ಲಿ ಮತ್ತೆ ದಾವೆ ಹೂಡಿದೆ.

ಈ ಹಿಂದೆ ಸುಪ್ರೀಂಕೋರ್ಟ್ ಆದೇಶದಂತೆ ವಿಕಲಚೇತನ ನೌಕರರಿಗೆ ಅವರ ಸೇವಾ ಜೇಷ್ಠತೆಯನ್ನು ಅನುಸರಿಸಿ ಬಡ್ತಿಯಲ್ಲಿ ಮೀಸಲಾತಿಯನ್ನು ನೀಡುವಂತೆ ಈ ಹಿಂದಿನ ಸರಕಾರದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಅನೇಕ ಸಚಿವರಿಗೂ ಮನವಿ ಪತ್ರ ನೀಡಿದರೂ ಕೂಡಾ ಯಾವುದೇ ಪ್ರಯೋಜನ ಆಗಿರಲಿಲ್ಲ.

ಇದನ್ನು ಅರಿತ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರು ಬಡ್ತಿ ಮೀಸಲಾತಿ ಜಾರಿಗೆ ಮಾಡದ ಸರಕಾರದ ನಡೆಯನ್ನು ಪ್ರಶ್ನೆ ಮಾಡಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ನ್ಯಾಯಾಲಯದಿಂದ ಸರಕಾರಕ್ಕೆ ನೋಟಿಸ್ ಹೋದ ಕೂಡಲೇ ಸರಕಾರ ತನ್ನ ಕೊನೆಯ ಸಚಿವ ಸಂಪುಟದಲ್ಲಿ ಕೇವಲ ಸಿ ಮತ್ತು ಡಿ ಹುದ್ದೆಗಳಿಗೆ ಮಾತ್ರ ಆದೇಶ ಜಾರಿಗೆ ಮಾಡುವ ಮೂಲಕ ವಿಕಲಚೇತನ ನೌಕರರಲ್ಲಿ ತಾರತಮ್ಯ ಉಂಟು ಮಾಡಿದೆ.

ವಿಕಲಚೇತನ ನೌಕರರ ತಾರತಮ್ಯ ಮಾಡಿರುವ ಸರಕಾರದ ನಡೆಯಿಂದ ಎ ಮತ್ತು ಬಿ ಹುದ್ದೆಗಳ ನೌಕರರಿಗೆ ಅನ್ಯಾಯ ಆಗುವುದನ್ನು ಗಮನಿಸಿ ಮತ್ತೇ ಸಂಘದಿಂದ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ದಾವೆಯ ಕುರಿತು ಕಿರಿಯ ವಕೀಲರಾದ ಶ್ರೀಮತಿ ಶ್ರೀ ಅವರ ಜೊತೆಯಲ್ಲಿ ಚರ್ಚೆ ನಡೆಸಲಾಯಿತು.

ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ, ಬೆಂಗಳೂರು ವಿಭಾಗದ ಕಾರ್ಯದರ್ಶಿ ಚೇತನ ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...