Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಹೋಗಿದ್ದು ನಿಜ : ಸೂರಪ್ಪ ಬಾಬು ಹೇಳಿದ್ದೇನು..?

---Advertisement---

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಳೆದ ಕೆಲ ದಿನಗಳಿಂದ ಸುದೀಪ್ ಹಾಗೂ ಕುಮಾರ್ ಗಲಾಟೆಯ ಸದ್ದು ಕಡಿಮೆಯಾಗುವಂತೆ ಕಾಣುತ್ತಿಲ್ಲ. ರವಿಚಂದ್ರನ್, ಶಿವಣ್ಣ ಇದರ ಬಗ್ಗೆ ಚರ್ಚೆ ನಡೆಸಿದರೂ ಸಮಸ್ಯೆಗೆ ಇನ್ನು ಪರಿಹಾರ ಸಿಕ್ಕಂತೆ ಕಾಣುತ್ತಿಲ್ಲ. ಇದರ ಹಿಂದೆ ಸೂರಪ್ಪ ಬಾಬು ಇದಾರೆ ಎಂಬ ಆರೋಪಗಳು ಕೇಳಿ ಬಂದಿತ್ತು. ಇದೀಗ ಸೂರಪ್ಪ ಬಾಬು ಈ ಬಗ್ಗೆ ಮಾತನಾಡಿದ್ದಾರೆ.

ಕೆಸಿಎನ್ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಳ್ಳೋಕೆ ಹೋಗಿದ್ದು ನಿಜ. ಅವರನ್ನ ನಾನು ತಡೆದಿದ್ದೆ. ಅವರು ನನ್ನ ಸ್ನೇಹಿತರು. ಆದ್ರೆ ನಾನು ಸಪೋರ್ಟ್ ಮಾಡಿದೆ ಅಂತ ಹೇಳಿದ್ದಾರೆ. ವಾಣಿಜ್ಯ ಮಂಡಳಿ ಯಾರಪ್ಪದು..? ನಾನು ಮೆಂಬರ್ ಅದಕ್ಕೆ. ಕಾರ್ಯಕಾರಿ ಸಮಿತಿ ಸದಸ್ಯ ಆಗಿದ್ದೆ.

ಇದೇ ವೇಳೆ ಚಂದ್ರಚೂಡ್ ಗೆ ಸೂರಪ್ಪ ಬಾಬು ವಾರ್ನಿಂಗ್ ನೀಡಿದ್ದು, ಯಾವಾಗ ನನ್ನ ಹೆಂಡ್ತಿ ಮಕ್ಕಳ ವಿಷ್ಯಕ್ಕೆ ಬಂದ್ರಿ ಕೋಪ ನೆತ್ತಿಗೆ ಏರಿತು. ಅದಕ್ಕೆ ಈಗ ಉತ್ತರಿಸುವ ಸಮಯ ಬಂದಿದೆ. ನನ್ನ ಸಿನಿಮಾದಲ್ಲಿ ನಟಿಸಿರುವುದು ಎಲ್ಲಾ ದೊಡ್ಡ ದೊಡ್ಡ ಹೀರೋಗಳೇ. ಸುದೀಪ್ ಸರ್ ನನ್ನ ಬಗ್ಗೆ ಎಲ್ಲೂ ಕಂಪ್ಲೇಂಟ್ ಮಾಡಿಲ್ಲ. ಇವತ್ತು 3 ಸಿನಿಮಾಗಳನ್ನ ದೊಡ್ಡ ಸ್ಟಾರ್ ಗಳ ಜೊತೆ ಮಾಡ್ತಿದೀನಿ.

ಕುಮಾರ್ ಏನೋ ಮಾತಾಡಿದ್ದಕ್ಕೆ ನಾನ್ ಜವಾಬ್ದಾರಿನಾ..?. ಆತನಿಗೆ ನ್ಯಾಯ ಕೊಡಿಸೋಕೆ ನಾಲ್ಕು ಜನ್ರ ಹತ್ರ ಹೋಗಿದ್ದೆ. ಸರಿ ಮಾಡಿ ಕೊಡಿ ಅಂತ. ಆದ್ರೆ ಒಳ್ಳೆ ಕೆಲಸ ಮಾಡಿ ಇಲ್ಲಾಂದ್ರೆ ಬಿಡಿ.
ಸಾಲ ಮಾಡಿ ಬಡ್ಡಿ ಕಟ್ಟೋ ಅವಶ್ಯಕತೆ ನನಗಿಲ್ಲ. ನನ್ನ ಮಗಳು ಮೆರಿಟ್ ಮೇಲೆ ಓದ್ತಾಯಿರೋದು. ನಾನು ಮನೆ ಖರೀದಿ ಮಾಡಿರೋದನ್ನ ಮಾರಿದಿನಿ. ಎರಡು ಮೂರು ವರ್ಷಗಳ ಹಿಂದೆ ಮಾತನಾಡಿರೋದನ್ನ ಈಗ ಬಿಟ್ಟಿದ್ದಾರೆ.

ನನ್ನ ಮನೆ ವಿಷಯ ಬಂದಿದ್ದಕೆ ನಾನು ಸುದ್ದಿಗೋಷ್ಠಿ ಮಾಡ್ತಿರೋದು. ನಾನು ದುರಹಂಕಾರಿ ಮನುಷ್ಯ ಅಲ್ಲ. ನನಗೆ 56 ವರ್ಷ. ಯಾವಾಗ ಸಾಯ್ತಿನೋ ಗೊತ್ತಿಲ್ಲ. ಚಂದ್ರಚೂಡ್ ಅವರೇ ಮನೆ ಒಡೆಯೋ ಕೆಲಸ ಮಾಡಬೇಡಿ. ನಂಬಿಕೆ ಇಲ್ಲ ಅಂದ್ರೆ ಅಗ್ರಿಮೆಂಟ್ ಮಾಡ್ಕೊಳಿ. ಚಂದ್ರಚೂಡ್ ಎದುರು ಬಂದ್ರು ಅವನ ಜೊತೆ ನಾನು ಮಾತಾಡಲ್ಲ. ನನ್ನ ಒಬ್ಬನ ಬಗ್ಗೆ ತೇಜೋವದೆ ಮಾಡಿಲ್ಲ ಅವರು. ಆತ ನನಗೆ ಸಂಬಂಧ ಇಲ್ಲದೆ ಇರೋ ವ್ಯಕ್ತಿ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment