Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಹೋಗಿದ್ದು ನಿಜ : ಸೂರಪ್ಪ ಬಾಬು ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಳೆದ ಕೆಲ ದಿನಗಳಿಂದ ಸುದೀಪ್ ಹಾಗೂ ಕುಮಾರ್ ಗಲಾಟೆಯ ಸದ್ದು ಕಡಿಮೆಯಾಗುವಂತೆ ಕಾಣುತ್ತಿಲ್ಲ. ರವಿಚಂದ್ರನ್, ಶಿವಣ್ಣ ಇದರ ಬಗ್ಗೆ ಚರ್ಚೆ ನಡೆಸಿದರೂ ಸಮಸ್ಯೆಗೆ ಇನ್ನು ಪರಿಹಾರ ಸಿಕ್ಕಂತೆ ಕಾಣುತ್ತಿಲ್ಲ. ಇದರ ಹಿಂದೆ ಸೂರಪ್ಪ ಬಾಬು ಇದಾರೆ ಎಂಬ ಆರೋಪಗಳು ಕೇಳಿ ಬಂದಿತ್ತು. ಇದೀಗ ಸೂರಪ್ಪ ಬಾಬು ಈ ಬಗ್ಗೆ ಮಾತನಾಡಿದ್ದಾರೆ.

ಕೆಸಿಎನ್ ಕುಮಾರ್ ಅವರು ಆತ್ಮಹತ್ಯೆ ಮಾಡಿಕೊಳ್ಳೋಕೆ ಹೋಗಿದ್ದು ನಿಜ. ಅವರನ್ನ ನಾನು ತಡೆದಿದ್ದೆ. ಅವರು ನನ್ನ ಸ್ನೇಹಿತರು. ಆದ್ರೆ ನಾನು ಸಪೋರ್ಟ್ ಮಾಡಿದೆ ಅಂತ ಹೇಳಿದ್ದಾರೆ. ವಾಣಿಜ್ಯ ಮಂಡಳಿ ಯಾರಪ್ಪದು..? ನಾನು ಮೆಂಬರ್ ಅದಕ್ಕೆ. ಕಾರ್ಯಕಾರಿ ಸಮಿತಿ ಸದಸ್ಯ ಆಗಿದ್ದೆ.

ಇದೇ ವೇಳೆ ಚಂದ್ರಚೂಡ್ ಗೆ ಸೂರಪ್ಪ ಬಾಬು ವಾರ್ನಿಂಗ್ ನೀಡಿದ್ದು, ಯಾವಾಗ ನನ್ನ ಹೆಂಡ್ತಿ ಮಕ್ಕಳ ವಿಷ್ಯಕ್ಕೆ ಬಂದ್ರಿ ಕೋಪ ನೆತ್ತಿಗೆ ಏರಿತು. ಅದಕ್ಕೆ ಈಗ ಉತ್ತರಿಸುವ ಸಮಯ ಬಂದಿದೆ. ನನ್ನ ಸಿನಿಮಾದಲ್ಲಿ ನಟಿಸಿರುವುದು ಎಲ್ಲಾ ದೊಡ್ಡ ದೊಡ್ಡ ಹೀರೋಗಳೇ. ಸುದೀಪ್ ಸರ್ ನನ್ನ ಬಗ್ಗೆ ಎಲ್ಲೂ ಕಂಪ್ಲೇಂಟ್ ಮಾಡಿಲ್ಲ. ಇವತ್ತು 3 ಸಿನಿಮಾಗಳನ್ನ ದೊಡ್ಡ ಸ್ಟಾರ್ ಗಳ ಜೊತೆ ಮಾಡ್ತಿದೀನಿ.

ಕುಮಾರ್ ಏನೋ ಮಾತಾಡಿದ್ದಕ್ಕೆ ನಾನ್ ಜವಾಬ್ದಾರಿನಾ..?. ಆತನಿಗೆ ನ್ಯಾಯ ಕೊಡಿಸೋಕೆ ನಾಲ್ಕು ಜನ್ರ ಹತ್ರ ಹೋಗಿದ್ದೆ. ಸರಿ ಮಾಡಿ ಕೊಡಿ ಅಂತ. ಆದ್ರೆ ಒಳ್ಳೆ ಕೆಲಸ ಮಾಡಿ ಇಲ್ಲಾಂದ್ರೆ ಬಿಡಿ.
ಸಾಲ ಮಾಡಿ ಬಡ್ಡಿ ಕಟ್ಟೋ ಅವಶ್ಯಕತೆ ನನಗಿಲ್ಲ. ನನ್ನ ಮಗಳು ಮೆರಿಟ್ ಮೇಲೆ ಓದ್ತಾಯಿರೋದು. ನಾನು ಮನೆ ಖರೀದಿ ಮಾಡಿರೋದನ್ನ ಮಾರಿದಿನಿ. ಎರಡು ಮೂರು ವರ್ಷಗಳ ಹಿಂದೆ ಮಾತನಾಡಿರೋದನ್ನ ಈಗ ಬಿಟ್ಟಿದ್ದಾರೆ.

ನನ್ನ ಮನೆ ವಿಷಯ ಬಂದಿದ್ದಕೆ ನಾನು ಸುದ್ದಿಗೋಷ್ಠಿ ಮಾಡ್ತಿರೋದು. ನಾನು ದುರಹಂಕಾರಿ ಮನುಷ್ಯ ಅಲ್ಲ. ನನಗೆ 56 ವರ್ಷ. ಯಾವಾಗ ಸಾಯ್ತಿನೋ ಗೊತ್ತಿಲ್ಲ. ಚಂದ್ರಚೂಡ್ ಅವರೇ ಮನೆ ಒಡೆಯೋ ಕೆಲಸ ಮಾಡಬೇಡಿ. ನಂಬಿಕೆ ಇಲ್ಲ ಅಂದ್ರೆ ಅಗ್ರಿಮೆಂಟ್ ಮಾಡ್ಕೊಳಿ. ಚಂದ್ರಚೂಡ್ ಎದುರು ಬಂದ್ರು ಅವನ ಜೊತೆ ನಾನು ಮಾತಾಡಲ್ಲ. ನನ್ನ ಒಬ್ಬನ ಬಗ್ಗೆ ತೇಜೋವದೆ ಮಾಡಿಲ್ಲ ಅವರು. ಆತ ನನಗೆ ಸಂಬಂಧ ಇಲ್ಲದೆ ಇರೋ ವ್ಯಕ್ತಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!