Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನನ್ನು ಹೆಸರಿಸಿ ಅಚ್ಚರಿ ಮೂಡಿಸಿದ ಹೆಚ್.ಡಿ. ದೇವೇಗೌಡ

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಬಿಜೆಪಿ ವಿಪಕ್ಷ ಸ್ಥಾನದಲ್ಲಿ ನಿಂತಿದೆ. ಆದ್ರೆ ಇನ್ನು ಕೂಡ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಬಿಜೆಪಿ ಆ ಕಡೆ ಹೆಚ್ಚು ಗಮನ ಕೂಡ ಹರಿಸಿಲ್ಲ. ಕಾಂಗ್ರೆಸ್ ನಾಯಕರು ಸಾಕಷ್ಟು ಸಲ ವ್ಯಂಗ್ಯ ಮಾಡಿದೆ. ಮೊದಲು ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಎಂದು. ಆದರೆ ಇನ್ನೂ ಆಯ್ಕೆಯಾಗಿಲ್ಲ. ಇದರ ಜೊತೆಗೆ ಇದೀಗ ಮಾಜಿ ಪ್ರಧಾನಿ ದೇವೇಗೌಡ ಅವರು, ಬಿಜೆಪಿ ವಿಚಾರಕ್ಕೆ ಬೆಂಬಲ ಸೂಚಿಸಿ ಆಶ್ಚರ್ಯ ತಂದಿದ್ದಾರೆ.

ಬಿಜೆಪಿಯಲ್ಲಿ ಸದ್ಯ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನ ಕೂಡ ಖಾಲಿ ಇದೆ. ಹೀಗಾಗಿ ಎರಡು ಸ್ಥಾನಗಳನ್ನು ಬಿಜೆಪಿ ತುಂಬಬೇಕಿದೆ. ಈ ಎರಡು ಸ್ಥಾನವನ್ನು ಬಿಜೆಪಿ ತುಂಬಲೇಬೇಕಿದೆ. ಈ ಎರಡು ಸ್ಥಾನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ‌ ದೇವೇಗೌಡ ಅವರು ಹೆಸರನ್ನು ಸೂಚಿಸಿದ್ದಾರೆ.

ಇಂದು ಸುದ್ದಿಗೋಷ್ಟಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು, ಮಾಜಿ ಶಾಸಕ ಸಿಟಿ ರವಿ ಹಾಗೂ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿಚಾರವಾಗಿ ಚರ್ಚೆ ನಡೆದಿದೆ. ಆದ್ರೆ ಅದು ಇನ್ನೂ ಅಂತಿಮಗೊಂಡಿಲ್ಲ. ಆಡಳಿತರೂಢ ಕಾಂಗ್ರೆಸ್‌ ಸರ್ಕಾರ ತಮ್ಮ ವಿರುದ್ಧ ಯಾವುದೇ ಟೀಕೆಗಳಿಗೆ ಬಿಜೆಪಿಯವರಿಗೆ ನಿಮ್ಮಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಯೇ ಆಗಿಲ್ಲ. ಮೊದಲು ಅದು ಮಾಡಿ ಎಂದು ಕೌಂಟರ್‌ ಕೊಡುತ್ತಲೇ ಬಂದಿತ್ತು. ಹೀಗಾಗಿ ಈ ಬಗ್ಗೆ ಚರ್ಚೆ ಇನ್ನು ಇದ್ದೇ ಇದೆ.

ಅವರ ಪಕ್ಷದಲ್ಲಿ ಏನು ನಡೆಯುತ್ತಿದೆ ಅನ್ನೋದು ನಮಗೆ ಬೇಕಿಲ್ಲ. ನಾವೂ ಯಾರ ಜೊತೆಗೂ ಕೈ ಜೋಡಿಸುವುದಿಲ್ಲ. ಲೋಕಸಭಾ ಚುನಾವಣೆಗೆ ನಾವೂ ಯಾರೊಂದಿಗೂ ಕೈಜೋಡಿಸಿಲ್ಲ. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾವೂ ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!