ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ನರೇಂದ್ರ ಮೋದಿಯವರನ್ನು ಸೋಲಿಸಲೇಬೇಕೆಂದು ವಿಪಕ್ಷಗಳೆಲ್ಲ ನಿರ್ಧಾರ ಮಾಡಿವೆ. ಇಂದು ಲೋಕಸಭಾ ಕಲಾಪದಲ್ಲಿ ಎನ್ಡಿಎ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿವೆ. ಮೋದಿಯನ್ನು ಮಣಿಸಲು ಅವಿಶ್ವಾಸ ನಿರ್ಣಯ ಮಂಡಿಸಲು ಯೋಜನೆ ರೂಪಿಸಿವೆ.
ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದಿಂದ ಅವಿಶ್ವಾಸ ನಿರ್ಣಯ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಲೋಕಸಭೆಗೆ ಹೋಗುವ ಮುನ್ನ ಕಾಂಗ್ರೆಸ್ ಸದಸ್ಯರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಯಾಗಲಿದೆ. ಬಳಿಕ ಲೋಕಸಭೆಯಲ್ಲಿ ಅವಿಶ್ವಾಸ ಮಂಡನೆಯ ಕೂಗು ಕೇಳಲಿದೆ.
ಈ ಹಿಂದೆ ಕೂಡ ಮೋದಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗಿತ್ತು. 2018ರಲ್ಲಿ ಟಿಡಿಪಿ ಪಕ್ಷ ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು. ಈಗ 2023ರಲ್ಲಿ ವಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ ಮಾಡಲಾಗಿದೆ. ಆದರೆ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲಿ ಸ್ಪಷ್ಟ ಬಹುಮತವಿರುವ ಹಿನ್ನೆಲೆ ಸರ್ಕಾರ ಪತನ ಅಷ್ಟು ಸುಲಭವಲ್ಲ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












