Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್ ಬಗ್ಗೆ ಗೃಹ ಸಚಿವರ ರಿಯಾಕ್ಷನ್ : ಬಿಜೆಪಿಗರು ಯಾಕೆ ರಾಜಕಾರಣ ಮಾಡ್ತಿದ್ದಾರೆ ಎಂದು ಪ್ರಶ್ನೆ

ಸಚಿವ ಪರಮೇಶ್ವರ್
---Advertisement---

 

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳು ಬಂಧನದಲ್ಲಿದ್ದಾರೆ. ಗಲಾಟೆಯಲ್ಲಿ ಬಂಧಿತರಾಗಿರುವವರನ್ನು ನಿಯಮಾನುಸಾರ ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಕೆಲವೊಂದು ಪ್ರಕರಣದಲ್ಲಿ ಹಾಕಿರುವ ಕೇಸ್ ಗಳಲ್ಲಿ ಸತ್ಯಾಂಶ ಇಲ್ಲದೆ ಹೋದರೆ ಅವುಗಳನ್ನು ವಾಪಾಸ್ ಪಡೆಯಿರಿ ಎಂದು ತನ್ವೀರ್ ಸೇಠ್ ಹೇಳಿದ್ದಾರೆ. ಅವರ ಮನವಿ ಪತ್ರವನ್ನು ತಕ್ಷಣ ತೆಗೆದುಕೊಳ್ಳುವುದಿಲ್ಲ. ಇದನ್ನು ಸಚಿವ ಸಂಪುಟ ಉಪಸಮಿತಿಯ ಮುಂದೆ ಇಡಲಾಗುತ್ತದೆ.

ನಾವೀಗ ಪ್ರಕ್ರಿಯೆ ಶುರು ಮಾಡಿದ್ದೇವೆ ಅಷ್ಟೇ. ನಂತರ ಈ ವಿಚಾರ ಕ್ಯಾಬಿನೆಟ್ ಮುಂದೆ ಬರುತ್ತದೆ. ಕ್ಯಾಬಿನೆಟ್ ನಲ್ಲಿ ಅದು ಅಪ್ರೂವಲ್ ಆಗುತ್ತದೆ ಅಂತ ಅಲ್ಲ. ಕಾನೂನಾತ್ಮಕವಾಗಿ ಅದನ್ನು ನೋಡಿ ತೀರ್ಮಾನ ಮಾಡುತ್ತೇವೆ. ಬಿಜೆಪಿಯವರು ಅದ್ಯಾಕೆ ರಾಜಕಾರಣ ಮಾಡ್ತಿದ್ದಾರೆ. ಸಣ್ಣ ಸಣ್ಣ ವಿಷಯಗಳಲ್ಲು ರಾಜಕಾರಣ ಮಾಡ್ತಿದ್ದಾರೆ. ಬರಗಾಲ, ಪ್ರವಾಹದ ಬಗ್ಗೆ ಅವರು ಮಾತನಾಡಲ್ಲ. ಅವರಿಗೆ ಬೇರೆ ಕೆಲಸವೇ ಇಲ್ಲ ಎಂಬಂತೆ ಕಾಣುತ್ತದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment