ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಒಂದಷ್ಟು ಬಿಸಿಬಿಸಿ ಸುದ್ದಿ ಸದ್ದು ಮಾಡುತ್ತಿದೆ. ಒಬ್ಬೊಬ್ಬರೇ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇತ್ತಿಚೆಗಷ್ಟೇ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಕುಟುಂಬಸ್ಥರು ವಿದೇಶಕ್ಕೆ ಹಾರಿದ್ದಾರೆ. ಕುಮಾರಸ್ವಾಮಿ ಕುಟುಂಬ ವಿದೇಶಿ ಪ್ರವಾಸದಲ್ಲಿರುವಾಗಲೇ ಮಾಜಿ ಸಿಎಂ ಯಡಿಯೂರಪ್ಪ ಅವರ ಕುಟುಂಬವೂ ವಿದೇಶಕ್ಕೆ ಭೇಟಿ ನೀಡಿದೆ.
ಕೆಂಪೇಗೌಡ ಏರ್ಪೋರ್ಟ್ ನಿಂದ ಬಿಎಸ್ವೈ ಕುಟುಂಬಸ್ಥರು, ವಿದೇಶಕ್ಕೆ ಫ್ಲೈಟ್ ಹತ್ತಿದ್ದಾರೆ. ಇಂದು ಮುಂಜಾನೆ 3.30ಕ್ಕೆ ವಿದೇಶಕ್ಕೆ ವಿಮಾನ ಹತ್ತಿದ್ದಾರೆ. ಬಿಎಸ್ಚೈ ಕುಟುಂಬ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ಬಿಎಸ್ವೈ ಯಡಿಯೂರಪ್ಪ ಅವರಿಗೆ ಬಿವೈ ವಿಜಯೇಂದ್ರ ಹಾಗೂ ಬಿಎಸ್ವೈ ಆಪ್ತ ರುದ್ರೇಶ್ ಸಾಥ್ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















