ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ ಉಡುಪಿಗೆ ಬಂದಿದೆ : ಗೃಹ ಸಚಿವ ಪರಮೇಶ್ವರ್

1 Min Read

 

ಉಡುಪಿ: ವಿದ್ಯಾರ್ಥಿನಿಯರ ಶೌಚಾಲಯಕ್ಕೆ ಕ್ಯಾಮರಾ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಇಂದು ಉಡುಪಿಗೆ ಭೇಟಿ ನೀಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಗೃಹ ಸಚಿವ ಜಿ ಪರಮೇಶ್ವರ್, ಮಹಿಳಾ ಆಯೋಗ ಮಣಿಪುರಕ್ಕೆ ಹೋಗಿಲ್ಲ. ಇಲ್ಲಿಗೆ ಬಂದಿದೆ ಎಂದಿದ್ದಾರೆ.

ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಸತ್ಯಾಸತ್ಯತೆಯನ್ನು ತಿಳಿಯಲು ಹೇಳಿದ್ದೇನೆ. ನಿನ್ನೆ ಹೇಳಿದ್ದು ಬೇರೆ ಅರ್ಥದಲ್ಲಿ ಎಂದಿದ್ದಾರೆ.

ಇನ್ನು ಈ ಘಟನೆ ಸಂಬಂಧ ಜನಾಕ್ರೋಶ ಹೆಚ್ಚಾದ ಹಿನ್ನೆಲೆ ಮೂವರು ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಡಿಯೋ ಮಾಡಿದ ಅಲಿಮತುಲ್ ಶೈಫಾ, ಶವಾನಾಜ್ ಮತ್ತು ಆಲಿಯಾ ವಿರುದ್ಧ ದೂರು ದಾಖಲಿಸಲಾಗಿದೆ. ಸೆಕ್ಷನ್ 509, 204, 175, 34 ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *