Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ಜಿಲ್ಲೆಯಲ್ಲಿ ಮುಂದುವರಿದ ಮಳೆ : ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ

ದಾವಣಗೆರೆ (ಜುಲೈ.27) ಜಿಲ್ಲೆಯಲ್ಲಿ ಜುಲೈ 26 ರಂದು ಬಿದ್ದ ಮಳೆಯ ವಿವರದನ್ವಯ 7.8 ಮಿ.ಮೀ. ಸರಾಸರಿ ಮಳೆಯಾಗಿದೆ. ಅಧಿಕ ಮಳೆಯಿಂದ ರೂ. 20.70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ ವಾಡಿಕೆ ಮಳೆ 4.8 ಮಿ.ಮೀ ಹಾಗೂ ವಾಸ್ತವ ಮಳೆ 6.4 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 4.9 ಮಿ.ಮೀ ಹಾಗೂ ವಾಸ್ತವ ಮಳೆ 9.0 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 1.8 ಮಿ.ಮೀ ಹಾಗೂ ವಾಸ್ತವ ಮಳೆ 11.2 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 3.1 ಮಿ.ಮೀ ಹಾಗೂ ವಾಸ್ತವ ಮಳೆ 8.5 ಮಿ.ಮೀ, ಜಗಳೂರು ವಾಡಿಕೆ ಮಳೆ 1.3 ಮಿ.ಮೀ ಹಾಗೂ ವಾಸ್ತವ ಮಳೆ 7.3 ಮಿ.ಮೀ,  ನ್ಯಾಮತಿಯಲ್ಲಿ ವಾಡಿಕೆ ಮಳೆ 5.2 ಮಿ.ಮೀ ಹಾಗೂ ವಾಸ್ತವ ಮಳೆ 5.5 ಮಿ.ಮೀ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 16 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 4.80 ಲಕ್ಷ ಹಾಗೂ 2 ದನದ ಕೊಟ್ಟಿಗೆ ಹಾನಿಯಾಗಿ ರೂ.20 ಸಾವಿರ ಅಂದಾಜು ನಷ್ಟ ಸಂಭವಿಸಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ತೀವ್ರ ಹಾನಿಯಾಗಿದ್ದು ಅಂದಾಜು ರೂ.2.00 ಲಕ್ಷ ಹಾಗೂ 4 ಮನೆ ಭಾಗಶಃ ಹಾನಿಯಾಗಿದ್ದು ರೂ. 1.20 ಲಕ್ಷ ಅಂದಾಜು ನಷ್ಟ  ಸಂಭವಿಸಿದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 10 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 0.65 ಸಾವಿರ ಹಾಗೂ 2 ಎಕರೆ ಬೆಳೆ ಹಾನಿಯಾಗಿ ಅಂದಾಜು ರೂ.50 ಸಾವಿರ ನಷ್ಟ, 1 ಜಾನುವಾರು ಜೀವ ಹಾನಿಯಾಗಿದ್ದು ಅಂದಾಜು ರೂ.0.35 ಸಾವಿರ ನಷ್ಟ ಸಂಭವಿಸಿದೆ.

ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಮನೆ ತೀವ್ರ ಹಾನಿಯಾಗಿದ್ದು ಅಂದಾಜು ರೂ.4.00 ಲಕ್ಷ ಹಾಗೂ 5 ಮನೆ ಭಾಗಶಃ ಹಾನಿಯಾಗಿದ್ದು ರೂ. 2.60 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ತೀವ್ರ ಹಾನಿಯಾಗಿದ್ದು ಅಂದಾಜು ರೂ.1.20 ಲಕ್ಷ ಹಾಗೂ 7 ಮನೆ ಭಾಗಶಃ ಹಾನಿಯಾಗಿದ್ದು, ರೂ. 2.80 ಲಕ್ಷ ಅಂದಾಜು ನಷ್ಟ, 1 ಜಾನುವಾರು ಜೀವ ಹಾನಿಯಾಗಿದ್ದು ಅಂದಾಜು ರೂ.0.40 ಸಾವಿರ ನಷ್ಟ ಸಂಭವಿಸಿದೆ.

ಜಿಲ್ಲೆಯಲ್ಲಿ ಒಟ್ಟಾರೆ ರೂ20.70 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!