Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯೋಧರ ಶಿಸ್ತು, ಏಕಾಗ್ರತೆಯನ್ನು ಪ್ರತಿಯೊಬ್ಬರೂ ಪಾಲಿಸಬೇಕು‌ : ಕೆ.ಪಿ.ಎಂ.ಗಣೇಶಯ್ಯ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, (ಜು.30): ಯೋಧರ ಶಿಸ್ತು, ಏಕಾಗ್ರತೆಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ದೇಶದ ಗಡಿ ಕಾಯಲು ಯೋಧನಿದ್ದರೆ, ಮನೆ ಮತ್ತು ಸಮಾಜವನ್ನು ಮುನ್ನೆಡೆಸುವ ಜವಾಬ್ದಾರಿ ಪ್ರತಿ ಮನುಷ್ಯನ ಕರ್ತವ್ಯವಾಗಿರುತ್ತದೆ ಎಂದು ರಂಗನಿರ್ದೇಶಕ ಹಾಗೂ ಕಸಾಪ ಜಿಲ್ಲಾ ಗೌ.ಕಾರ್ಯದರ್ಶಿ ಕೆ.ಪಿ.ಎಂ.ಗಣೇಶಯ್ಯ ಅಭಿಪ್ರಾಯಪಟ್ಟರು.

ನಗರದ ವಿದ್ಯಾವಿಕಾಸ ಶಾಲೆಯ ಆವರಣರದಲ್ಲಿ ಚಿನ್ಮಯ ಮಯೂರ ಯೋಗ ಕ್ರೀಡಾ ಸಂಸ್ಥೆಯು ಏರ್ಪಡಿಸಿದ್ದ ಕಾರ್ಗಿಲ್ ವಿಜಯೋತ್ಸವದ ಯೋಧ ನಮನ ಕಾರ್ಯಕ್ರಮದಲ್ಲಿ ವಿಶೇಷಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು.

ಯೋಧರು ಗಡಿ ಕಾಯುವ ಮುನ್ನ ಮಾನಸಿಕ ಮತ್ತು ದೈಹಿಕವಾಗಿ ಹಲವು ರೀತಿಯ ಕಸರತ್ತುಗಳನ್ನು ನಡೆಸುತ್ತಾರೆ. ಅಂತೆಯೇ ಒಂದು ಕುಟುಂಬ ಮತ್ತು ಸಮಾಜವನ್ನು ಪ್ರತಿನಿಧಿಸುವ ವ್ಯಕ್ತಿ ಅದೂ ಹೆಣ್ಣಾಗಿರಲಿ, ಗಂಡಾಗಿರಲಿ ತನ್ನ ಜವಾಬ್ದಾರಿಯನ್ನು ಅರಿತು ನಿಷ್ಠೆಯ ಬದುಕನ್ನು ಸಾಗಿಸಬೇಕಾಗುತ್ತದೆ. ಉತ್ತಮ ಆರೋಗ್ಯ ಮತ್ತು ಗುಣಮಟ್ಟದ ಶಿಕ್ಷಣಕ್ಕಾಗಿ ಯೋಗ ತರಬೇತಿಯನ್ನು ಪಡೆಯಬೇಕಾಗುತ್ತದೆ. ಶಾಂತಿ ನೆಮ್ಮದಿಯನ್ನು ಯೋಗದಿಂದ ಗಳಿಸಬಹುದು ಎಂದರು.

ನಿವೃತ್ತ ಉಪನ್ಯಾಸಕಿ ಶಾರದ ವೆಂಕಟೇಶರೆಡ್ಡಿ ಇವರು ಯೋಧರ ತ್ಯಾಗ ಬಲಿದಾನಗಳ ಕಾರ್ಗಿಲ್ ವಿಜಯದಿವಸ್ ಬಗ್ಗೆ ನೆನಪು ಮಾಡಿಕೊಂಡು ಯೋಧರಿಗೆ ನಮನ ಸಲ್ಲಿಸಿದರು. ಗುಡ್ಡದರಂಗವ್ವನಹಳ್ಳಿಯ ನಿವೃತ್ತ ಸೈನಿಕ ಪಿ.ಆರ್.ಶ್ರೀನಿವಾಸ್ ರೆಡ್ಡಿ ಇವರನ್ನು ಇದೇ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಚಿನ್ಮಯ ಮಯೂರ ಯೋಗ ಕ್ರೀಡಾ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅನುಸೂಯ ತಿಮ್ಮಾರೆಡ್ಡಿ ಸ್ವಾಗತಿಸಿದರು, ಕುಮಾರಿ ನಾಗಸಾರಿಕಾ ಪ್ರಾರ್ಥಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ.ಬಿ.ಮುರುಳಿ ವಂದಿಸಿದರು. ಯೋಗ ಶಿಕ್ಷಕಿ ಎಸ್.ಕೆ.ಸುನಿತ ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!