ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್ ಸಿನಿಮಾ ಬರಲಿದೆ ಎಂಬ ಮಾತು ಪದೇ ಪದೇ ಕೇಳಿ ಬರ್ತಾ ಇತ್ತು. ಕಡೆಗೂ ಅದಕ್ಕೊಂದು ಗಳಿಗೆ ಕೂಡ ಕೂಡಿ ಬಂದಿದೆ. ಸದ್ಯ ಸಿನಿಮಾದ ಕೆಲಸಗಳು ಶುರುವಾಗಿದೆ. ಕರ್ನಾಟಕದ 24ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧರಿತ ಕಥೆಯ ಸಿನಿಮಾ ಶುರುವಾಗಿದೆ.
ಗಂಗಾವತಿ ಮೂಲದ ಹಯಾದ್ ಪಿರ್ ಎಂಬುವವರು ಈ ಸಿನಿಮಾ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಪಾತ್ರವನ್ನು ತಮಿಳಿನ ವಿಜಯ್ ಸೇತುಪತಿ ಮಾಡಲಿದ್ದಾರೆ ಎಂಬ ಮಾತುಗಳು ಓಡಾಡುತ್ತಿವೆ. ವಿಜಯ್ ಸೇತುಪತಿ ಕೂಡ ಸಿದ್ದರಾಮಯ್ಯ ಪಾತ್ರ ಮಾಡುವುದಕ್ಕೆ ಓಕೆ ಎಂದಿದ್ದಾರಂತೆ.

ವಿಜಯ್ ಸೇತುಪತಿ ಅವರು ಸಿನಿಮಾದಲ್ಲಿ 20-30 ನಿಮಿಷಗಳ ಕಾಲ ಬರಲಿದ್ದಾರೆ. ಇನ್ನು ಬಾಲ್ಯ ಹಾಗೂ ಪ್ರೌಢಾವಸ್ಥೆಯ ಪಾತ್ರವನ್ನು ಹೊಸಬರು ನಿರ್ವಹಿಸಲಿದ್ದಾರೆ. ಗೌರಿಬಿದನೂರು ಮೂಲದ ಸತ್ಯ ರತ್ನಂ ಎಂಬುವವರು ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರಂತೆ. ಈಗಾಗಲೇ ಫೈನಲ್ ಪ್ರಿ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆಯಂತೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















