ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಳೆದ 20 ವರ್ಷಗಳಿಂದ ತಿರುಪತಿಗೆ ನಂದಿನಿ ತುಪ್ಪವನ್ನು ಕಳುಹಿಸಿ ಕೊಡಲಾಗುತ್ತಿತ್ತು. ಆದ್ರೆ ಆ ಟೆಂಡರ್ ಕ್ಯಾನ್ಸಲ್ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ವಿಚಾರವಾಗಿ ಮಾತನಾಡಿದ್ದಾರೆ. ನಾವೂ ಕೇಳುವ ದರವನ್ನು ನೀಡುವುದಾದರೆ ತುಪ್ಪ ಪೂರೈಸಲು ಸಿದ್ಧ ಎಂದಿದ್ದಾರೆ.
ತಿರುಪತಿಗೆ 6 ತಿಂಗಳಿಗೆ 14 ಲಕ್ಷ ಕೆಜಿಯಷ್ಟು ತುಪ್ಪವನ್ನು ನೀಡಲಾಗುತ್ತಿತ್ತು. ಅದುವರೆ ರಿಯಾಯಿತಿ ದರದಲ್ಲಿ. ಈಗ ಹಾಲಿನ ದರ ಹೆಚ್ಚಳವಾಗಿದೆ. ಮೊದಲಿನ ಹಾಗೇ ರಿಯಾಯಿತಿ ದರದಲ್ಲಿ ತುಪ್ಪ ಪೂರೈಕೆ ಕಷ್ಟ ಎಂದೇ ಸರ್ಕಾರ ಅಭಿಪ್ರಾಯಪಟ್ಟಿದೆ.
ಇನ್ನು ಇದೇ ವಿಚಾರವಾಗಿ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ ಮಾಡಿದ್ದರು. ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ, ಭಕ್ತಿಯ ವಿಚಾರದಲ್ಲಿ ಕಾಂಗ್ರೆಸ್ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿಗೆ ಲಡ್ಡು ಪೂರೈಕೆ ಸ್ಥಗಿತಗೊಂಡಿದೆ ಎಂದಿದ್ದರು. ಅದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪದ ಪೂರೈಕೆ ಸ್ಥಗಿತಗೊಂಡಿರುವುದು ನಿನ್ನೆ, ಮೊನ್ನೆಯದಲ್ಲ. ಬಿಜೆಪಿ ಸರ್ಕಾರ ಇದ್ದಾಗಲೇ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು ಎಂದು ತಿರುಗೇಟು ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್