Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ತಂದೆಯ ಮೈ ಬಣ್ಣದ ಬಗ್ಗೆ ಮಾತನಾಡಿದ ಆರಗ ಜ್ಞಾನೇಂದ್ರಗೆ ಏನಂದ್ರು ಪ್ರಿಯಾಂಕ ಖರ್ಗೆ

---Advertisement---

ಆರಗ ಜ್ಞಾನೇಂದ್ರ ಅವರು ಮಲೆನಾಡಿನ ಬಗ್ಗೆ ಹೇಳುವಾಗ ಮಲ್ಲಿಕಾರ್ಜುನ ಖರ್ಗೆ ಬಣ್ಣದ ಬಗ್ಗೆ ಮಾತನಾಡಿದ್ದರು. ಬಳಿಕ ಅದಕ್ಕೆ ಸ್ಪಷ್ಟನೆ ಕೂಡ ನೀಡಿದ್ದರು. ಆದರೆ ಕಾಂಗ್ರೆಸ್ ನಿಂದ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಕೂಡ ಬೇಸರ ಹೊರ ಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಆರಗ ಜ್ಞಾನೇಂದ್ರ ಅವರೇ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು.

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ. ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ.

ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ. ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ. @BJP4Karnatakaಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ ಎಂದು ಟ್ವೀಟ್ ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...