Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳೆದ 20 ವರ್ಷದಲ್ಲಿ ತಿರಪತಿಗೆ 1 ಬಾರಿ ಮಾತ್ರ ನಂದಿನಿ ತುಪ್ಪ ಪೂರೈಕೆಯಾಯ್ತಾ..? ಏನಿತು ಹೊಸ ಟ್ವಿಸ್ಟ್..?

Facebook
Twitter
Telegram
WhatsApp

 

ಕಳೆದ ಕೆಲವು ದಿನಗಳಿಂದ ತಿರಪತಿಗೆ ಪೂರೈಕೆಯಾಗುವ ನಂದಿನಿ ತುಪ್ಪದ ಬಗ್ಗೆಯೇ ಚರ್ಚೆಯಾಗುತ್ತಿದೆ. ಸದ್ಯ ಕೆಎಂಎಫ್ ನಂದಿನಿ ತುಪ್ಪವನ್ನು ಕಡಿಮೆ ದರದಲ್ಲಿ ನೀಡುವುದಿಲ್ಲ ಎಂದು ಹೇಳಿದೆ. ಹೀಗಾಗಿ ಇದು ಚರ್ಚೆಗೆ ಗ್ರಾಸವಾಗಿದೆ. ಆದ್ರೆ ಇದೀಗ ಹೊಸ ತಿರುವು ಸಿಕ್ಕಿದೆ.

ಕೆಎಂಎಫ್ ಕಳೆದ 20 ವರ್ಷಗಳಿಂದ ನಂದಿನಿ ತುಪ್ಪವನ್ನು ರಿಯಾಯಿತಿ ದರದಲ್ಲಿ ಪೂರೈಕೆ ಮಾಡಲಾಗುತ್ತಿದೆ ಎಂದೇ ಹೇಳಿತ್ತು‌. ಆದ್ರೆ ಈ ಮಾತು ಅಪ್ಪಟ ಸುಳ್ಳು ಎಂದು ಟಿಟಿಡಿ ದೇವಸ್ಥಾನದ ಕಾರ್ಯನಿರ್ವಾಹಕರಾದ ಎವಿ ಧರ್ಮಾರೆಡ್ಡಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಖಾಸಗಿ ಚಾನೆಲ್ ಒಂದಕ್ಕೆ ಮಾತನಾಡಿರುವ ಧರ್ಮಾರೆಡ್ಡಿ ಅವರು, ಕೆಎಂಎಫ್ ಕಳೆದ 20 ವರ್ಷಗಳಿಂದ ಟಿಟಿಡಿಗೆ ತುಪ್ಪವನ್ನು ನೀಡುತ್ತಿದ್ದೇವೆ ಎಂದು ತಿಳಿಸಿದೆ. ಇದೆಲ್ಲಾ ಸುಳ್ಳು ಆರೋಪ. ಕಳೆದ 20 ವರ್ಷಗಳಲ್ಲಿ ಒಂದು ಬಾರಿ ಮಾತ್ರ ನಂದಿನಿ ತುಪ್ಪವನ್ನು ಪೂರೈಕೆ ಮಾಡಿದೆ. ತಿಮ್ಮಪ್ಪನ ಸನ್ನಿಧಿಗೆ ರವಾನೆಯಾದ ಎಲ್ಲಾ ತುಪ್ಪದ ಮಾದರಿಯನ್ನು ಪರೀಕ್ಷೆ ಮಾಡಲಾಗುತ್ತದೆ. ಟೆಸ್ಟ್ ನಲ್ಲಿ ಪಾಸ್ ಆದರೆ ಮಾತ್ರ ಟ್ರಕ್ ನಲ್ಲಿ ತುಪ್ಪ ಹೊತ್ತು ಬಂದಿದ್ದಕ್ಕೆ ಒಳಗೆ ಪ್ರವೇಶ ನೀಡಲಾಗುತ್ತದೆ ಎಂದಿದ್ದಾರೆ.

ಇದರ ನಡುವೆಯೇ ಕೆಎಂಎಫ್ ಪತ್ರ ಬರೆದು, ನೀವು ಕೇಳಿರುವ ದರಕ್ಕೆ ತುಪ್ಪ ಸರಬರಾಜು ಮಾಡಲು ಸಾಧ್ಯವಿಲ್ಲ. ಕಳೆದ 20 ವರ್ಷಗಳಿಂದ ಕೆಎಂಎಫ್ ಟಿಟಿಡಿಗೆ ತುಪ್ಪ ನೀಡುತ್ತಿದೆ. ದರದ ವಿಚಾರಕ್ಕೆ ಸ್ಥಗಿತಗೊಂಡಿರೋ ಸರಬರಾಜು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ನಿಮಗೆ ತುಪ್ಪ ನೀಡಲು ನಾವು ರೆಡಿ ಇದ್ದೇವೆ. ಗೊಂದಲ ಬಗೆಹರಿಕೆ ಬಗ್ಗೆ ಸಭೆ ನಡೆಸಲು ದಿನಾಂಕ ನೀಡುವಂತೆ ಟಿಟಿಡಿಗೆ ಕೇಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!