Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರಸ್ವಾಮಿ ಅವರ ಪೆನ್ ಡ್ರೈವ್ ವಿಚಾರಕ್ಕೆ ಬೇಸತ್ತ ಪ್ರಿಯಾಂಕ್ ಖರ್ಗೆ ಏನಂದ್ರು..?

---Advertisement---

 

ಬೆಂಗಳೂರು: ಇಂದು ಮಾಜಿ ಸಿಎಂ ಕುಮಾರಸ್ವಾಮಿ ವಿದೇಶದಿಂದ ಬಂದಿದ್ದಾರೆ. ಈ ವೇಳೆ ಏರ್ಪೋರ್ಟ್ ನಲ್ಲಿ ಮಾತನಾಡಿದ ಕುಮಾರಸ್ವಾಮಿ, ಪೆನ್ ಡ್ರೈವ್ ಈಗಲೇ ರಿಲೀಸ್ ಮಾಡಲ್ಲ ಎಂದಿದ್ದಾರೆ. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಜೆಡಿಎಸ್ ನವರು ಈಗ ಅಸ್ತಿತ್ವ ಕಳೆದುಕೊಂಡು ಬಿಟ್ಟಿದ್ದಾರೆ. ಮುಳುಗಿ ಹೋಗಿದ್ದಾರೆ. ಆ ಅಸ್ತಿತ್ವ ಉಳಿಸಿಕೊಳ್ಳಲು ಈ ರೀತಿ ಮಾತನಾಡುತ್ತಿದ್ದಾರೆ. ವಿಪಕ್ಷ ನಾಯಕರಾಗಲಿ ಈ ರೀತಿ ಮಾತನಾಡುತ್ತಿದ್ದಾರೆ ಎನಿಸುತ್ತಿದೆ. ಬಿಜೆಪಿಯವರಂತು ಹತಾಶರಾಗಿದ್ದಾರೆ. ಪ್ಲೇಯಿಂಗ್ ಲೆವೆಲ್ ನಲ್ಲಿ ಕ್ಯಾಪ್ಟನ್ ನ ಹುಡುಕಿದರೆ, ಇವರು ಬೇರೆಯದ್ದೇ ರೀತಿಯಲ್ಲಿ ಹುಡುಕುತ್ತಿದ್ದಾರೆ.

40% ಸರ್ಕಾರ ಅಂತ ಎನಿಸಿಕೊಂಡವರು ಅವರು. 40% ಸರ್ಕಾರ ಇದ್ದಾಗ ಇವರು ಯಾಕೆ ಮಾತನಾಡಲಿಲ್ಲ. ಪೆನ್ ಡ್ರೈವ್ ಬಿಡುಗಡೆ ಮಾಡ್ತೀನಿ ಅಂತ ಕೂಡ ಹೇಳಿದ್ದಾರೆ. ಪೆನ್ ಡ್ರೈವ್ ಪೆನ್ ಡ್ರೈವ್ ಅಂತಾರೆ. ಎಲ್ಲಿ ಹೋಯ್ತಪ್ಪ ಪೆನ್ ಡ್ರೈವ್. ಇವತ್ತು ನೋಡಿದ್ರೆ ಬಿಡುಗಡೆ ಮಾಡಲ್ಲ ಅಂತಿದ್ದಾರೆ. ಬಿಡುಗಡೆ ಮಾಡಿ ನಾವೂ ತನಿಖೆ ಮಾಡ್ತೀವಿ. ಎಸ್ ಪಿ ರೋಡಲ್ಲಿ ಎಷ್ಟು ಪೆನ್ ಡ್ರೈವ್ ಸಿಗಲ್ಲ. ಸುಮ್ಮನೆ ಕಂಟೆಂಟ್ ಇಲ್ಲದೆ ಏನನ್ನು ಮಾತನಾಡಬಾರದು ಜೆಡಿಎಸ್ ಅವರು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...