ಬೆಂಗಳೂರು, (ಆಗಸ್ಟ್ 04) : ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ.
ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ನೀಡಿದ ಸೂಚನೆಯ ಮೇರೆಗೆ ದುರಂತದಲ್ಲಿ ಮೃತರಾದ ಮಂಜುಳಾ, ರಘು ಹಾಗೂ ಪ್ರವೀಣ್ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳಂತೆ ಪರಿಹಾರ ಮಂಜೂರು ಮಾಡಿ, ಜಿಲ್ಲಾಧಿಕಾರಿಗಳಿಗೆ ಒಟ್ಟು 15 ಲಕ್ಷ ರೂ ಬಿಡುಗಡೆ ಮಾಡಲಾಗಿದೆ.
ಜುಲೈ 31 ರಂದು ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಎಸ್ಸಿ ಕಾಲೋನಿಯಲ್ಲಿ ಕುಡಿಯುವ ನೀರು ಕಲುಷಿತ ಹೊಂದಿದ್ದರಿಂದ ಅಲ್ಲಿನ ನಿವಾಸಿಗಳು ಅಸ್ವಸ್ಥಗೊಂಡು ಮೂವರು ಮೃತಪಟ್ಟಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಹಾಗೂ ಜಿಲ್ಲಾಧಿಕಾರಿಗಳು ಸಲ್ಲಿಸಿದ ವರದಿಯನ್ನು ಆಧರಿಸಿ ಪರಿಹಾರ ಬಿಡುಗಡೆ ಮಾಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











