ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ ಆ. 05 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಜಿಲ್ಲೆಯಲ್ಲಿ ಕೈಗೊಂಡಿರುವ “ಕರಾಮುವಿ ಶೈಕ್ಷಣಿಕ ಜಾಗೃತಿ ಪ್ರಚಾರ ಆಂದೋಲನ ವಾಹನ” ಕ್ಕೆ ಡಾನ್ ಬೋಸ್ಕೋ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಚೋಮನ್ ಕೆ.ಜೆ. ಶನಿವಾರದಂದು ಡಾನ್ ಬೋಸ್ಕೋ ಪದವಿ ಕಾಲೇಜು ಆವರಣದಲ್ಲಿ ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಕರಾಮುವಿ ಶೈಕ್ಷಣಿಕ ಜಾಗೃತಿ ಪ್ರಚಾರ ಆಂದೋಲನ ವಾಹನ” ಮೂಲಕ ಎಲ್ಲ ಜಿಲ್ಲೆಗಳಲ್ಲೂ ಎಲ್ಇಡಿ ಪರದೆಯುಳ್ಳ ಪ್ರಚಾರ ಆಂದೋಲನ ವಾಹನ ಮೂಲಕ ಮುಕ್ತ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಕಾರ್ಯಕ್ರಮಗಳು, ಕೋರ್ಸ್ಗಳು, ಅಧ್ಯಯನ ವಿಷಯಗಳು, ಶುಲ್ಕ ರಿಯಾಯಿತಿ, ಉಚಿತ ಪ್ರವೇಶಾತಿ ಬಗ್ಗೆ ಹಾಗೂ ಇನ್ನಿತರ ಶೈಕ್ಷಣಿಕ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಉನ್ನತ ಶಿಕ್ಷಣದಿಂದ ವಂಚಿತರಾದ ಸಮಾಜದ ವಿವಿಧ ವರ್ಗದ ಜನರಿಗೆ ವಿದ್ಯಾಭ್ಯಾಸ ಮುಂದುವರೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡುತ್ತಿರುವ ಸುವರ್ಣಾವಕಾಶವನ್ನು ಜಿಲ್ಲೆಯ ಜನ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕರಾಮುವಿ ಯಿಂದ ದೊರೆಯುತ್ತಿರುವ ಉನ್ನತ ಶಿಕ್ಷಣದ ಅವಕಾಶಗಳ ಬಗ್ಗೆ ಡಾನ್ ಬೋಸ್ಕೋ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಫಾದರ್ ಸಜ್ಜಿ ಜಾರ್ಜ್ ಅವರು ವಿವರಿಸಿದರು.
ಕರಾಮುವಿ ಚಿತ್ರದುರ್ಗ ಜಿಲ್ಲೆಯ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ರಾಧಿಕಾ ಬಿ.ಆರ್. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್