Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಲಗಿದ್ದವರು ಎದ್ದಿಲ್ಲ : ಅತ್ತಿಗೆ ಸಾವಿನ ಬಗ್ಗೆ ಶ್ರೀಮುರುಳಿ ಕಣ್ಣೀರು

---Advertisement---

 

ಬೆಂಗಳೂರು: ಪತ್ನಿ ಸ್ಪಂದನಾ ಜೊತೆಗೆ ವಿಜಯ್ ರಾಘವೇಂದ್ರ ವಿದೇಶ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸ್ಪಂದನಾಗೆ ನಿನ್ನೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇಂದು ಬೆಳಗ್ಗೆ ಸ್ಪಂದನಾ ಸ್ಥಿತಿ ಗಂಭೀರವಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬ್ಯಾಂಕಾಕ್ ನಲ್ಲಿಯೇ ಸ್ಪಂದನಾ ಮೃತದೇಹದ ಪೋಸ್ಟ್ ಮಾಟಂ ಮಾಡಲಾಗುತ್ತಿದೆ. ಥೈಲ್ಯಾಂಡ್ ನಲ್ಲಿ ವೈದ್ಯಕೀಯ ಕಾರ್ಯವಿಧಾನ ಮುಗಿಸಿ ನಾಳೆ ಬೆಂಗಳೂರಿಗೆ ಮೃತದೇಹ ಬರುವ ಸಾಧ್ಯತೆ ಇದೆ.

ಮಲ್ಲೇಶ್ವರಂನಲ್ಲಿವ ಸ್ಪಂದನಾ ತಂದೆ ಬಿಕೆ ಶಿವರಾಮ್ ಮನೆಯಲ್ಲಿ ಮುರುಳಿ ಮತ್ತು ಸ್ಪಂದನಾ ಮಗ ಶೌರ್ಯ ಇದ್ದಾರೆ‌‌. ವಿಷಯ ತಿಳಿದು ಆತಂಕಗೊಂಡಿದ್ದಾರೆ. ಮನೆಯವರಿಗೆ ಸಮಧಾನ ಮಾಡುವುದಕ್ಕೆ ರಾಜಕೀಯ ಗಣ್ಯರು ಆಗಮಿಸಿದ್ದಾರೆ. ಈಗಾಗಲೇ ಬಿಕೆ ಹರಿಪ್ರಸಾದ್, ಮುನಿರತ್ನ ಅವರು ಮನೆಗೆ ಬಂದು ಸಾಂತ್ವಾನ ಹೇಳಿದ್ದಾರೆ.

ಅತ್ತಿಗೆ ಸಾವಿನ ಬಗ್ಗೆ ಶ್ರೀ ಮುರುಳಿ ಮಾತನಾಡಿದ್ದು, ಅಣ್ಣಾ ಫೋನ್ ಮಾಡಿ ಹೇಳಿದ್ರು. ಮಲಗಿದ್ದೋರು ಎದ್ದೇಳಿಲ್ಲ. ಲೋ ಬಿಪಿ ಅಂತಾ ತಿಳಿದಿದೆ. ಸಾವು ಆಗಿರಯವುದು ನಿಜ. ಬೇರೆನೂ ಗೊತ್ತಿಲ್ಲ. ಇದಕ್ಕಿಂತ ಹೆಚ್ಚು ಏನೂ ಹೇಳುವುದಕ್ಕೆ ಈಗ ಆಗುತ್ತಿಲ್ಲ. ಇಷ್ಟೇ ಡಿಟೈಲ್ಸ್ ಗೊತ್ತಿರೋದು, ನಾಳೆ ಎಲ್ಲಾ ಗೊತ್ತಾಗುತ್ತೆ ಎಂದಿದ್ದಾರೆ.

ಇನ್ನು ಸ್ಪಂದನಾ ಚಿಕ್ಕಪ್ಪ ಬಿಕೆ ಹರಿಪ್ರಸಾದ್ ಮಾತನಾಡಿ, ಸ್ಪಂದನ ತನ್ನ ಕಸಿನ್ಸ್‌ ಜೊತೆ ಟ್ರಿಪ್ ಹೋಗಿದ್ರು. ರಾತ್ರಿ ಮಲಗಿದವರು ಬೆಳಿಗ್ಗೆ ಎದ್ದಿಲ್ಲ. ರಾತ್ರಿನೇ ವಿಷಯ ಗೊತ್ತಾ ಆಯ್ತು. ಪೋಸ್ಟ್ ಮಾರ್ಟ್ಂ ರಿಪೋರ್ಟ್ ಬಂದ ಮೇಲೆ ವಿಷಯ ಗೊತ್ತಾಗುತ್ತೆ. ಯಾವುದೇ ರೀತಿ ಊಹಾಪೋಹಾಗಳನ್ನು ಹಬ್ಬಿಸಬೇಡಿ. ನಾನು ಬ್ಯಾಂಕಾಕ್‌ಗೆ ಹೋಗ್ತೀನಿ. ಪೋಸ್ಟ್ ಮಾರ್ಟಂ ಆದ ನಂತರ ನಾಳೆ ಮೃತದೇಹ ಬರುತ್ತೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...