Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಪಂದನಾ ಇನ್ನಿಲ್ಲ ಅಂತ ರಾಘುಗೆ ಸಮಾಧಾನ ಮಾಡೋದು ಹೇಗೆ..? : ರಾಘಣ್ಣ ಕಣ್ಣೀರು

Facebook
Twitter
Telegram
WhatsApp

 

ಬೆಂಗಳೂರು: ಸ್ಪಂದನಾ ಮೃತದೇಹ ಬ್ಯಾಂಕಾಕ್ ನಿಂದ ನಿನ್ನೆ ರಾತ್ರಿಯೇ ಬಂದಿದೆ. ಮಧ್ಯರಾತ್ರಿಯಿಂದಾನೇ ಮಲ್ಲೇಶ್ವರಂನಲ್ಲಿರುವ ತಂದೆ ಬಿಕೆ ಶಿವರಾಮ್ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಹಿರಿಯ ನಟ, ನಟಿಯರು, ರಾಜಕೀಯ ನಾಯಕರು, ಆಪ್ತರು, ಸಂಬಂಧಿಕರು, ಅಭಿಮಾನಿಗಳೆಲ್ಲಾ ಸ್ಪಂದನಾ ಅಂತಿಮ ದರ್ಶನ ಪಡೆದಿದ್ದಾರೆ. ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ಈ ವೇಳೆ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ರಾಘು, ಅಪ್ಪು ಎಲ್ಲಾ ನಮ್ಮ‌ ಮನೆಯಲ್ಲಿಯೇ ಬೆಳೆದವರು. ಚಿಕ್ಕವರೇ ಬೇಗ ಹೋಗಿಬಿಡುತ್ತಾರೆ. ಇಂಥ ಸಮಯದಲ್ಲಿ ಏನು ಹೇಳಬೇಕು ಗೊತ್ತಾಗಲ್ಲ. ಮಗಳು ಇನ್ನಿಲ್ಲ ಅಂಥ ತಂದೆಗೆ ಹೇಳೋದಾ, ಹೆಂಡತಿ ಇನ್ನಿಲ್ಲ ಅಂತ ರಾಘುಗೆ ಸಮಾಧಾನ ಮಾಡುವುದು ಎಂದು ತಿಳಿತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ಇನ್ನು ಗಿರಿಜಾ ಲೋಕೇಶ್ ಮಾತನಾಡಿ, ಸ್ಪಂದನಾ ಮುಖದಲ್ಲಿ ಒಂದಿಷ್ಟು ಕಳೆ‌ಮಾಸಿಲ್ಲ. ಇನ್ನು ಬದುಕಿದ್ದಾಳೆ ಅಂತಾನೆ ಅನ್ನಿಸುತ್ತೆ. ದೇವರು ಅದೆಷ್ಟು ಕ್ರೂರಿ. ಒಂದು ಸುಂದರ ಸಂಸಾರವನ್ನು ಹಾಳು ಮಾಡಿಬಿಟ್ಟ ಎಂದು ನೋವು ಮಾಡಿಕೊಂಡಿದ್ದಾರೆ.

 

ಹಿರಿಯ ನಟ ಶ್ರೀನಾಥ್ ಮಾತನಾಡಿ, ಆ ಮಗು ಆತ್ಮಕ್ಕೆ ಶಾಂತಿ ಸಿಗಲಿ. ನಮ್ಮ ರಾಘುಗೆ ದುಃಖ ತಡೆದುಕೊಳ್ಳುವ ಶಕ್ತಿ ಆ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

High Blood Pressure : ಅಧಿಕ ರಕ್ತದೊತ್ತಡ ಎಷ್ಟು ಅಪಾಯಕಾರಿ ಗೊತ್ತಾ ?

ಸುದ್ದಿಒನ್ : ಅಧಿಕ ರಕ್ತದೊತ್ತಡ ಎನ್ನುವುದು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಈ ಸಮಸ್ಯೆ ಇದ್ದರೆ ಪ್ರತಿದಿನ ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಳ್ಳಬೇಕು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು?

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು? ಮಂಗಳವಾರ ರಾಶಿ ಭವಿಷ್ಯ -ಮೇ-21,2024 ನರಸಿಂಹ ಜಯಂತಿ ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!